ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಚೊಚ್ಚಲ ವಿಕೆಟ್‌ ಪಡೆದ ಕಿಂಗ್‌ ಕೊಹ್ಲಿ

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಚೊಚ್ಚಲ ವಿಕೆಟ್‌ ಪಡೆದು ಸಂಭ್ರಮಿಸಿದ್ದಾರೆ.

ಭಾರತ ನೀಡಿದ 411ರನ್‌ಗಳ ಗುರಿ ಬೆನ್ನತ್ತಿದ ನೆದರ್‌ಲ್ಯಾಂಡ್ಸ್‌ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡು ನಂತರ ನಾಯಕ ಸ್ಕಾಟ್‌ ಎಡ್ವರ್ಡ್ಸ್‌ ಹಾಗೂ ಸೈಬ್ರಾಂಡ್‌ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್‌ ಯಶಸ್ವಿಯಾಗಿದ್ದಾರೆ.

25ನೇ ಓವರ್‌ ಬೌಲ್‌ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್‌ ರನ್ನು ಔಟ್‌ ಮಾಡಿದರು. ಕೀಪರ್‌ ಕೆ ಎಲ್‌ ರಾಹುಲ್‌ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್‌ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್‌ ಪಡೆದು ಸಂಭ್ರಮಿಸಿದರು.

ಈ ಪಂದ್ಯದಲ್ಲಿ ವಿರಾಟ್‌ 3 ಓವರ್‌ ಬೌಲ್‌ ಮಾಡಿ 13 ರನ್‌ ನೀಡಿ 1 ವಿಕೆಟ್‌ ಕಬಳಿಸಿದರು. ವಿರಾಟ್‌ ಜೊತೆ ಶುಭ್‌ಮನ್‌ ಗಿಲ್‌ ಹಾಗೂ ಸೂರ್ಯ ಕುಮಾರ್‌ ಯಾದವ್‌ ಕೂಡ ಬೌಲ್‌ ಮಾಡಿದ್ದು ವಿಶೇಷವಾಗಿತ್ತು.

ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್‌ ಶರ್ಮಾ ವಿರಾಟ್‌ ಅವರನ್ನು ನಾವು 6ನೇ ಬೌಲರ್‌ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.

andolanait

Recent Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

44 mins ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

1 hour ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

2 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

2 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

2 hours ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

2 hours ago