ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಚೊಚ್ಚಲ ವಿಕೆಟ್‌ ಪಡೆದ ಕಿಂಗ್‌ ಕೊಹ್ಲಿ

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಚೊಚ್ಚಲ ವಿಕೆಟ್‌ ಪಡೆದು ಸಂಭ್ರಮಿಸಿದ್ದಾರೆ.

ಭಾರತ ನೀಡಿದ 411ರನ್‌ಗಳ ಗುರಿ ಬೆನ್ನತ್ತಿದ ನೆದರ್‌ಲ್ಯಾಂಡ್ಸ್‌ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡು ನಂತರ ನಾಯಕ ಸ್ಕಾಟ್‌ ಎಡ್ವರ್ಡ್ಸ್‌ ಹಾಗೂ ಸೈಬ್ರಾಂಡ್‌ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್‌ ಯಶಸ್ವಿಯಾಗಿದ್ದಾರೆ.

25ನೇ ಓವರ್‌ ಬೌಲ್‌ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್‌ ರನ್ನು ಔಟ್‌ ಮಾಡಿದರು. ಕೀಪರ್‌ ಕೆ ಎಲ್‌ ರಾಹುಲ್‌ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್‌ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್‌ ಪಡೆದು ಸಂಭ್ರಮಿಸಿದರು.

ಈ ಪಂದ್ಯದಲ್ಲಿ ವಿರಾಟ್‌ 3 ಓವರ್‌ ಬೌಲ್‌ ಮಾಡಿ 13 ರನ್‌ ನೀಡಿ 1 ವಿಕೆಟ್‌ ಕಬಳಿಸಿದರು. ವಿರಾಟ್‌ ಜೊತೆ ಶುಭ್‌ಮನ್‌ ಗಿಲ್‌ ಹಾಗೂ ಸೂರ್ಯ ಕುಮಾರ್‌ ಯಾದವ್‌ ಕೂಡ ಬೌಲ್‌ ಮಾಡಿದ್ದು ವಿಶೇಷವಾಗಿತ್ತು.

ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್‌ ಶರ್ಮಾ ವಿರಾಟ್‌ ಅವರನ್ನು ನಾವು 6ನೇ ಬೌಲರ್‌ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

9 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago