ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ.
ಭಾರತ ನೀಡಿದ 411ರನ್ಗಳ ಗುರಿ ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್ಗಳಿಗೆ ಎರಡು ವಿಕೆಟ್ ಕಳೆದುಕೊಂಡು ನಂತರ ನಾಯಕ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್ ಯಶಸ್ವಿಯಾಗಿದ್ದಾರೆ.
25ನೇ ಓವರ್ ಬೌಲ್ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್ ರನ್ನು ಔಟ್ ಮಾಡಿದರು. ಕೀಪರ್ ಕೆ ಎಲ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದರು.
ಈ ಪಂದ್ಯದಲ್ಲಿ ವಿರಾಟ್ 3 ಓವರ್ ಬೌಲ್ ಮಾಡಿ 13 ರನ್ ನೀಡಿ 1 ವಿಕೆಟ್ ಕಬಳಿಸಿದರು. ವಿರಾಟ್ ಜೊತೆ ಶುಭ್ಮನ್ ಗಿಲ್ ಹಾಗೂ ಸೂರ್ಯ ಕುಮಾರ್ ಯಾದವ್ ಕೂಡ ಬೌಲ್ ಮಾಡಿದ್ದು ವಿಶೇಷವಾಗಿತ್ತು.
ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್ ಶರ್ಮಾ ವಿರಾಟ್ ಅವರನ್ನು ನಾವು 6ನೇ ಬೌಲರ್ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…