ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ.
ಭಾರತ ನೀಡಿದ 411ರನ್ಗಳ ಗುರಿ ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್ಗಳಿಗೆ ಎರಡು ವಿಕೆಟ್ ಕಳೆದುಕೊಂಡು ನಂತರ ನಾಯಕ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್ ಯಶಸ್ವಿಯಾಗಿದ್ದಾರೆ.
25ನೇ ಓವರ್ ಬೌಲ್ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್ ರನ್ನು ಔಟ್ ಮಾಡಿದರು. ಕೀಪರ್ ಕೆ ಎಲ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದರು.
ಈ ಪಂದ್ಯದಲ್ಲಿ ವಿರಾಟ್ 3 ಓವರ್ ಬೌಲ್ ಮಾಡಿ 13 ರನ್ ನೀಡಿ 1 ವಿಕೆಟ್ ಕಬಳಿಸಿದರು. ವಿರಾಟ್ ಜೊತೆ ಶುಭ್ಮನ್ ಗಿಲ್ ಹಾಗೂ ಸೂರ್ಯ ಕುಮಾರ್ ಯಾದವ್ ಕೂಡ ಬೌಲ್ ಮಾಡಿದ್ದು ವಿಶೇಷವಾಗಿತ್ತು.
ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್ ಶರ್ಮಾ ವಿರಾಟ್ ಅವರನ್ನು ನಾವು 6ನೇ ಬೌಲರ್ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…