ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ.
ಭಾರತ ನೀಡಿದ 411ರನ್ಗಳ ಗುರಿ ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್ಗಳಿಗೆ ಎರಡು ವಿಕೆಟ್ ಕಳೆದುಕೊಂಡು ನಂತರ ನಾಯಕ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್ ಯಶಸ್ವಿಯಾಗಿದ್ದಾರೆ.
25ನೇ ಓವರ್ ಬೌಲ್ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್ ರನ್ನು ಔಟ್ ಮಾಡಿದರು. ಕೀಪರ್ ಕೆ ಎಲ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದರು.
ಈ ಪಂದ್ಯದಲ್ಲಿ ವಿರಾಟ್ 3 ಓವರ್ ಬೌಲ್ ಮಾಡಿ 13 ರನ್ ನೀಡಿ 1 ವಿಕೆಟ್ ಕಬಳಿಸಿದರು. ವಿರಾಟ್ ಜೊತೆ ಶುಭ್ಮನ್ ಗಿಲ್ ಹಾಗೂ ಸೂರ್ಯ ಕುಮಾರ್ ಯಾದವ್ ಕೂಡ ಬೌಲ್ ಮಾಡಿದ್ದು ವಿಶೇಷವಾಗಿತ್ತು.
ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್ ಶರ್ಮಾ ವಿರಾಟ್ ಅವರನ್ನು ನಾವು 6ನೇ ಬೌಲರ್ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…