ಕ್ರೀಡೆ

ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕಿಂಗ್ ಕೊಹ್ಲಿಯೇ ಸರದಾರ

ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ 2022ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ರನ್‌ ಮೆಶಿನ್‌ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಡಿಲೇಡ್ ನ ಓವಲ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧ 40 ಬಾಲ್‌ ಗಳಿಗೆ 50 ರನ್‌ ಬಾರಿಸಿದ ಕೊಹ್ಲಿ ಈ ತನಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4008 ಸಾವಿರ ರನ್‌ ಗಳ ಸಾಧನೆ ಮಾಡಿದ್ದಾರೆ.
ಕೊಹ್ಲಿ 115 ಅಂತಾರಾಷ್ಟ್ರೀಯ ಟಿ20 ಪಂದ್ಯಗಳ 107 ಇನ್ನಿಂಗ್ಸ್‌ ಗಳಲ್ಲಿ 4008 ರನ್‌ ಗಳಿಸಿದ್ದಾರೆ.
52.74 ರನ್‌ ಗಳ ಸರಾಸರಿಯಲ್ಲಿ 137.97 ಸ್ಟ್ರೈಕ್‌ ರೇಟ್‌ ನೊಂದಿಗೆ ಈ ದಾಖಲೆ ಬರೆದಿರುವ ವಿರಾಟ್‌ ಅವರ ಸಾಧನೆಯಲ್ಲಿ ಒಂದು ಶತಕ ಮತ್ತು 37 ಅರ್ಧ ಶತಕಗಳು ಸೇರಿವೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ದಾಖಲೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ಹೆಸರಿನಲ್ಲಿತ್ತು. ಅವರು 23 ಇನ್ನಿಂಗ್ಸ್ ಗಳಲ್ಲಿ 1016 ರನ್ ಗಳಿಸಿ ಅಗ್ರಸ್ಥಾನಿಯಾಗಿದ್ದರು.
ವಿಶ್ವಕಪ್‌ ಟೂರ್ನಿಯಲ್ಲಿ 270 ರನ್ ಗಳಿಸುವ ಮೂಲಕ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
2022 ರಲ್ಲಿ ಕೊಹ್ಲಿ ಟಿ20 ಪಂದ್ಯಗಳಲ್ಲಿ ಒಟ್ಟು 750 ರನ್‌ ಗಳಿಸಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಇದ್ದಾರೆ.
2022ರ ಅಕ್ಟೋಬರ್‌ನಲ್ಲಿ ಒಟ್ಟಾರೆ 205 ಟಿ20- ರನ್‌ಗಳನ್ನು ಬಾರಿಸುವ ಮೂಲಕ ಕೊಹ್ಲಿ ಇತ್ತೀಚೆಗಷ್ಟೇ ಐಸಿಸಿಯ ಮೊದಲ ಮಾಸಿಕ ಪ್ರಶಸ್ತಿ ಸ್ವೀಕರಿಸಿದ್ದರು.
ಇದೇ ಅಂಗಣದಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ ಬೌಂಡರಿಗಳ ನೆರವಿನಿಂದ ಕೊಹ್ಲಿ ಅಜೇಯ 64 ರನ್ ಕಲೆಹಾಕಿದ್ದರು.
ಪಾಕಿಸ್ತಾನ ವಿರುದ್ಧ (ಔಟಾಗದೆ 82) ಸ್ಮರಣೀಯ ಇನ್ನಿಂಗ್ಸ್ ಆಡಿದ ಕೊಹ್ಲಿ, ನೆದರ್ಲೆಂಡ್ಸ್ ವಿರುದ್ಧ (ಔಟಾಗದೆ 62) ನಿರ್ಣಾಯಕ ಇನ್ನಿಂಗ್ಸ್ ಆಡಿದ್ದರು. ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ವಿರುದ್ಧ ಮಾತ್ರ ಕಡಿಮೆ ರನ್‌ ಗಳಿಸಿದ್ದಾರೆ.
ವಿಶ್ವಕಪ್‌ ಟೂರ್ನಿಯಲ್ಲಿ ನಾಲ್ಕು ಅರ್ಧ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿಅಡಿಲೇಡ್‌ ಮೈದಾನದಲ್ಲಿ ಸರಾಸರಿ 90ಕ್ಕಿಂತ ಹೆಚ್ಚಿನ ರನ್ ‌ ಸರಾಸರಿ ಹೊಂದಿದ್ದಾರೆ.
andolana

Recent Posts

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

32 mins ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

43 mins ago

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…

1 hour ago

ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ : ಯದುವೀರ್ ಆರೋಪ

ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…

1 hour ago

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

3 hours ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

3 hours ago