ಕ್ರೀಡೆ

ಸೆಮಿಸ್‌ ಕದನದಲ್ಲಿ ಭಾರತಕ್ಕೆ ಕೀವಿಸ್‌ ಸವಾಲು: ಕಾಡಲಿದೆಯಾ ವಾಂಖೆಡೆ

ಮುಂಬೈ : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಂತಿಮ ಘಟ್ಟ ತಲುಪಿದ್ದು, ಇಂದು (ಬುಧವಾರ) ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಮೊದಲ ಸಮಿಸ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ರಣರೋಚಕ ಪಂದ್ಯಕ್ಕೆ ಸಾಕ್ಷಿಯಾಗಿರುವ ವಾಂಖೆಡೆ ಸ್ಟೇಡಿಯಂ ಬಳಿ ಸಾವಿರಾರು ಕ್ರಿಕೆಟ್‌ ಪ್ರಮಿಗಳು ಧಾವಿಸಿದ್ದು, ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಪರ ಘೋಷಣೆ ಕೂಗುತ್ತಿದ್ದಾರೆ.

ಭಾರತೀಯ ಕಾಲಮಾನ ಮದ್ಯಾಹ್ನ 2 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ. ಇತ್ತಾ ಭಾರತದ ಮೇಲೆ 2019ರ ಸೆಮಿ ಫೈನಲ್‌ ಪಂದ್ಯದಲ್ಲಿ ಜಯ ದಾಖಲಿಸಿದ್ದ ನ್ಯೂಜಿಲ್ಯಾಂಡ್‌ ತಂಡ ಮತ್ತೊಂದು ಜಯದ ಕನಸಿನಲ್ಲಿದೆ. ಆದರೆ, ತನ್ನ ತವರು ನೆಲದಲ್ಲಿ ಟೂರ್ನಿಯ ಆಡುತ್ತಿರುವ ಭಾರತ ಲೀಗ್‌ ಹಂತದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡವನ್ನು ಬಗ್ಗು ಬಡಿದ ಸಂತಸದಲ್ಲಿದೆ. ಇಂದಿನ ರಣರೋಛಕ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೆ ನೇರ ಪ್ರವೇಶ ಪಡೆದರೇ ಸೋತ ತಂಡ ಟೂರ್ನಿಯಿಂದ ಹೊರ ಬೀಳಲಲಿದೆ.

ಕಾಡಲಿದೆಯಾ ವಾಂಖೆಡೆ: ಭಾರತದ ಪಾಲಿಗೆ ಸೆಮಿಸ್‌ನಲ್ಲಿ ದೊಡ್ಡ ತಲೆ ನೋವಾಗಿ ಈ ಮೈದಾನ ಕಾಡಲಿದೆ. ಭಾರತ ಇದುವರೆಗೆ 2011ರ ಏಕದಿನ ವಿಶ್ವಕಪ್‌ ಫೈನಲ್‌ ನಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಜಯ ದಾಖಲಿಸಿದ್ದು ಹೊರತುಪಡಿಸಿದರೇ, ಇದುವರೆಗೆ ಐಸಿಸಿಯ ಪ್ರತಿಷ್ಠೀತ ಪಂದ್ಯದಲ್ಲಿ ಭಾರತ ಮೂರು ಸೆಮಿಸ್‌ ಪಂದ್ಯಗಳನ್ನು ವಾಂಖೆಡೆ ಮೈದಾನಲ್ಲಿ ಆಡಿದ್ದು, ತಾನಾಡಿದ ಎಲ್ಲಾ ಪಂದ್ಯಗಳಲ್ಲಿಯೂ ಸೋಲಿನ ಕಹಿ ಉಂಡಿದೆ.

1987ರ ವಿಶ್ವಕಪ್‌ನ ಸೆಮಿಸ್‌ ಪಂದ್ಯದಲ್ಲಿ ಭಾರತ ಇಂಗ್ಲೆಂಡ್‌ ವಿರುದ್ಧ 35 ರನ್‌ಗಳಿಂದ ಪರಾಭವಗೊಂಡರೇ, 1989ರ ನೆಹರು ಕಪ್‌ ಡೂರ್ನಿಯಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 8 ವಿಕೆಟ್‌ಗಳ ಸೋಲು ಕಂಡಿತು. ಕೊನೆಯದಾಗಿ ವಾಂಖೆಡೆಯಲ್ಲಿ ಆಡಿದ 2016ರ ಟಿ-20 ವಿಶ್ವಕಪ್‌ ಸೆಮಿ ಪಂದ್ಯದಲ್ಲಿ ಭಾರತ ವಿಂಡೀಸ್‌ ವಿರುದ್ಧ ಹಿನಾಯ ಸೋಲು ಕಂಡಿತು. ಈ ಎಲ್ಲಾ ಪಂದ್ಯಗಳು ನಡೆದದ್ದು ವಾಂಖೆಡೆಯಲ್ಲಿಯೇ.

ಇವತ್ತಿನ ಪಂದ್ಯದಲ್ಲಿ ಭಾರತಕ್ಕೆ ದೀಪಾವಳಿ ಹಬ್ಬದ ಸಿಹಿ ಸಿಗಲಿದೆಯಾ ಇಲ್ಲಾ ಎಂದಿನಂತೆ ನಿರಾಸೆ ಹೊತ್ತು ನಿರ್ಗಮಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಪಿಚ್‌ ರಿಪೋರ್ಟ್‌ : ಬ್ಯಾಟಿಂಗ್‌ಗೆ ಹೆಚ್ಚು ಸಹಕರಿಸುವ ಈ ಮೈದಾನದಲ್ಲಿ ರನ್‌ ಹೊಳೆಯನ್ನು ನಿರೀಕ್ಷಿಸಬಹುದಾಗಿದೆ. ಬೌನ್ಸ್‌ ಹೆಚ್ಚಾಗಿರುವುದರಿಂದ ಸ್ಪಿನ್ನರ್ಸ್‌ಗಳಿಗೆ ಕಠಿಣವಾಗಲಿದೆ. ಎಂದಿನಂತೆ ಟಾಸ್‌ ಗೆದ್ದ ನಾಯಕರು ಬೌಲಿಂಗ್‌ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಟೀಂ ಇಂಡಿಯಾ ಗೆಲುವಿಗೆ ಪ್ರಾರ್ಥನೆ-ಪೂಜೆ: ಇನ್ನೂ ಇವತ್ತಿನ ಪಂದ್ಯ ಹೈ ವೋಲ್ಟೇಜ್‌ ಕದನಕ್ಕೆ ಸಾಕ್ಷಿಯಾಗಿದ್ದು, ಕ್ರೀಡಾಭಿಮಾನಿಗಳು ಬೆಳಗ್ಗೆಯಿಂದಲೇ ದೇಶಾದ್ಯಂತ ಹರಕೆ-ಪೂಜೆ ಸಲ್ಲಿಸುತ್ತಿರುವುದು ಕಂಡುಬಂದಿದೆ.

ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್‌ ಕೀಪರ್‌), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

6 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

8 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

9 hours ago