ಕ್ರೀಡೆ

IPL 2024: ಮುಂಬೈ ಇಂಡಿಯನ್ಸ್‌ ವಿರುದ್ಧ ಗೆದ್ದು ಪ್ಲೇ-ಆಫ್‌ಗೆ ಲಗ್ಗೆಯಿಟ್ಟ ಕೆಕೆಆರ್‌

ಕೊಲ್ಕತ್ತಾ: ಇಲ್ಲಿನ ಕ್ರಿಕೆಟ್‌ ಕಾಶಿ ಈಡೆನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಕೊಲ್ಕತ್ತಾ ನೈಟ್‌ರೈಡರ್ಸ್‌ 18 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಈ ಸೀಸನ್‌ನಲ್ಲಿ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿ ಹೊರಹೊಮ್ಮಿದೆ.

ಈ ಪಂದ್ಯಕ್ಕೆ ಕೆಲಕಾಲ ಮಳೆ ಅಡ್ಡಿಪಡಿಸಿತು. ಬಳಿಕ ಪಂದ್ಯವನ್ನು 16 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಇನ್ನು ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೊಲ್ಕತ್ತಾ ನೈಟ್‌ರೈಡರ್ಸ್‌ ನಿಗದಿತ 16 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 157 ರನ್‌ ಗಳಿಸಿ, ಎದುರಾಳಿ ತಂಡಕ್ಕೆ 158ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 16 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 139 ರನ್‌ಗಳಿಸಿ 18 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಕೊಲ್ಕತ್ತಾ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಈ ಬಾರಿ ಆರಂಭಿಕ ಆಘಾತ ಉಂಟಾಯಿತು. ಭರ್ಜರಿ ಫಾರ್ಮ್‌ನಲ್ಲಿರುವ ನರೈನ್‌ ಡಕ್‌ಔಟ್‌ ಆದರೇ, ಫಿಲಿಪ್‌ ಸಾಲ್ಟ್‌ 6(5) ರನ್‌ಗಳಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿದರು. ನಂತರ ಬಂದ ನಾಯಕ ಶ್ರೇಯಸ್‌ ಐಯ್ಯರ್‌ 7(10)ರನ್‌ ಗಳಿಸಿ ಔಟಾದರು.

ಬಳಿಕ ಒಂದಾದ ವೆಂಕಟೇಶ್‌ ಅಯ್ಯರ್‌ ಹಾಗೂ ನಿತೀಶ್‌ ರಾಣಾ ತಂಡಕ್ಕೆ ಚೇತರಿಕೆ ನೀಡಿದರು. ವೆಂಕಟೇಶ್‌ ಅಯ್ಯರ್‌ 21ಎಸೆತಗಳಲ್ಲಿ 6ಬೌಂಡರಿ ಹಾಗೂ 2ಸಿಕ್ಸರ್‌ ಸಹಿತ 42 ರನ್‌ ಗಳಿಸಿದರು. ಇವರಿಗೆ ಜತೆಯಾಗಿ ನಿತೀಶ್‌ ರಾಣಾ 33(23) ರನ್‌ ಗಳಿಸಿ ಔಟಾದರು. ಉಳಿದಂತೆ ರಸೆಲ್‌ 24(14), ರಿಂಕು ಸಿಂಗ್‌ 20(12), ರಣದೀಪ್‌ ಸಿಂಗ್‌ 17(8) ಸ್ಟಾರ್ಕ್‌ 2(2)ರನ್‌ ಗಳಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್ಪ್ರಿತ್‌ ಬುಮ್ರಾ ಹಾಗೂ ಪಿಯೂಷ್‌ ಚಾವ್ಲಾ ತಲಾ 2, ತಷಾರಾ ಹಾಗೂ ಅನ್ಸುಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಆರಂಭಿಕ ಆಟಗಾರರು ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಈ ಜೋಡಿಯು ಪವರ್‌ ಪ್ಲೇನಲ್ಲಿ ವಿಕೆಟ್‌ ನಷ್ಟವಿಲ್ಲದೇ 59ರನ್‌ ಕಲೆಹಾಕಿದರು. ಇಸಾನ್‌ ಕಿಸಾನ್‌ 22ಎಸೆತಗಳಲ್ಲಿ 5ಬೌಂಡರಿ, 2ಸಿಕ್ಸರ್‌ ಸಹಿತ 40ರನ್‌ ಬಾರಿಸಿದರು. ಇದು ಮುಂಬೈ ಪರ ಬಂದ ಅತ್ಯಧಿಕ ಮೊತ್ತ. ರೋಹಿತ್‌ ಶರ್ಮಾ 19(24) ರನ್‌ ಗಳಿಸಿ ಔಟಾದರು. ಈ ಜೋಡಿಯ ನಿರ್ಗಮನದ ನಂತರ ತಂಡಕ್ಕೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು.

ಸೂರ್ಯಕುಮಾರ್‌ ಯಾದವ್‌ 11(14), ನಾಯಕ ಹಾರ್ದಿಕ್‌ ಪಾಂಡ್ಯ 2(4), ಟಿಮ್‌ ಡೇವಿಡ್‌ ಡಕ್‌ಔಟ್‌, ವಧೇರ 3(3), ನಮನ್‌ ಧೀರ್‌ 17(6), ಕಾಂಬೋಜ್‌ 2(2), ಪಿಯೂಷ್‌ ಚಾವ್ಲಾ 1(2) ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ತಿಲಕ್‌ ವರ್ಮಾ 32(17)ರನ್‌ ಗಳಿಸಿಯೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಕೊಲ್ಕತ್ತಾ ಪರ ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ, ರಸೆಲ್‌ ತಲಾ ಎರಡು ವಿಕೆಟ್‌ ಪಡೆದರೇ, ನರೈನ್‌ ಒಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

4 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

17 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

19 hours ago