ಕ್ರೀಡೆ

IPL 2024: ಸಾಲ್ಟ್‌ ಅರ್ಧಶತಕ: ಲಖನೌ ವಿರುದ್ಧ ಕೆಕೆಆರ್‌ಗೆ ಭರ್ಜರಿ ಗೆಲುವು!

ಕೋಲ್ಕತ್ತಾ: ಸ್ಟಾರ್ಕ್‌ ಅವರ ಬೌಲಿಂಗ್‌, ಪಿಲಿಪ್‌ ಸಾಟ್‌ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಎಲ್‌ಎಸ್‌ಜಿ ನಡುವಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ಸೂಪರ್‌ಜೈಂಟ್ಸ್ ತಂಡವು 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 161 ರನ್ ಕಲೆ ಹಾಕಿ, 162 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 15.4 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 162ರನ್‌ ಗಳಿಸಿತು.

ಎಲ್‌ಎಸ್‌ಜಿ ಇನ್ನಿಂಗ್ಸ್‌: ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಲಖನೌ ಬ್ಯಾಟರ್‌ಗಳು ಆರಂಭದಿಂದಲೇ ರನ್ ಗಳಿಸಲು ಪರದಾಡಿದರು. ಕ್ವಿಂಟನ್ ಡಿಕಾಕ್ 10 ರನ್ ಗಳಿಸಿದರೆ, ದೀಪಕ್ ಹೂಡಾ 8 ರನ್‌ಗೆ ಪೆವಿಲಿಯನ್ ಸೇರಿಕೊಂಡರು. ಸ್ಟೋಯ್ನಿಸ್‌ 10, ಕೃನಾಲ್‌ ಪಾಂಡ್ಯ 7, ಅರ್ಷದ್‌ ಖಾನ್‌ 5 ರನ್‌ ಬಾರಿಸಿ ಹೊರ ನಡೆದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೇ ಮತ್ತೊಂದೆಡೆ ಬ್ಯಾಟ್ ಬೀಸಿದ ನಾಯಕ ಕೆ.ಎಲ್. ರಾಹುಲ್ 39 ರನ್ ಗಳಿಸಿದರು. ಆಯುಶ್ ಬದೋನಿ 29 ರನ್‌ ಗಳಿಸಿದರೇ ಕೊನೆಯಲ್ಲಿ ನಿಕೋಲಸ್ ಪೂರನ್ 32 ಎಸೆತಗಳಲ್ಲಿ 2ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 45 ರನ್ ಸಿಡಿಸುವ ಮೂಲಕ ಸ್ಪರ್ಧಾತ್ಮಕ ಮೊತ್ತ ಗಳಿಸಲು ಪ್ರಯತ್ನಿಸಿದರು.

ಕೆಕೆಆರ್‌ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದರು. ಉಳಿದಂತೆ, ವೈಭವ್ ಅರೋರಾ, ಸುನಿಲ್ ನಾರಾಯಣ್, ವರುಣ್ ಚಕ್ರವರ್ತಿ ಮತ್ತು ರಸೇಲ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚದರು.

ಕೆಕೆಆರ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಕೆಕೆಆರ್‌ಗೆ ಪಿಲಿಪ್‌ ಸಾಲ್ಟ್‌ ಉತ್ತಮ ಆರಂಭ ಒದಗಿಸಿದರು. ಸಾಲ್ಟ್‌ ಓಟಾಗದೇ 47 ಎಸೆತಗಳಲ್ಲಿ 14ಬೌಂಡರಿ, 3 ಸಿಕ್ಸರ್‌ ಸಹಿತ 89 ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇವರಿಗೆ ಜೊತೆಯಾಗಿ ನಾಯಕ ಶ್ರೇಯಸ್‌ ಅಯ್ಯರ್‌ 38 ರನ್‌ ಬಾರಿಸಿದರು. ಉಳಿದಂತೆ ನರೈನ್‌ 6 ಹಾಗೂ ರಘುವಂಶಿ 7 ರನ್‌ ಬಾರಿಸಿದರು. ಕೇವಲ 2 ವಿಕೆಟ್‌ ಕಳೆದುಕೊಂಡು ತವರು ನೆಲದಲ್ಲಿ ಕೆಕೆಆರ್‌ ಗೆದ್ದು ಬೀಗಿತು.

ಪಂದ್ಯ ಶ್ರೇಷ್ಠ: ಪಿಲಿಪ್‌ ಸಾಲ್ಟ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

1 hour ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

2 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

3 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

3 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

3 hours ago