ಕ್ರೀಡೆ

IPL 2024: ಸಾಲ್ಟ್‌ ಅರ್ಧಶತಕ: ಲಖನೌ ವಿರುದ್ಧ ಕೆಕೆಆರ್‌ಗೆ ಭರ್ಜರಿ ಗೆಲುವು!

ಕೋಲ್ಕತ್ತಾ: ಸ್ಟಾರ್ಕ್‌ ಅವರ ಬೌಲಿಂಗ್‌, ಪಿಲಿಪ್‌ ಸಾಟ್‌ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಎಲ್‌ಎಸ್‌ಜಿ ನಡುವಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ಸೂಪರ್‌ಜೈಂಟ್ಸ್ ತಂಡವು 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 161 ರನ್ ಕಲೆ ಹಾಕಿ, 162 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 15.4 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 162ರನ್‌ ಗಳಿಸಿತು.

ಎಲ್‌ಎಸ್‌ಜಿ ಇನ್ನಿಂಗ್ಸ್‌: ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಲಖನೌ ಬ್ಯಾಟರ್‌ಗಳು ಆರಂಭದಿಂದಲೇ ರನ್ ಗಳಿಸಲು ಪರದಾಡಿದರು. ಕ್ವಿಂಟನ್ ಡಿಕಾಕ್ 10 ರನ್ ಗಳಿಸಿದರೆ, ದೀಪಕ್ ಹೂಡಾ 8 ರನ್‌ಗೆ ಪೆವಿಲಿಯನ್ ಸೇರಿಕೊಂಡರು. ಸ್ಟೋಯ್ನಿಸ್‌ 10, ಕೃನಾಲ್‌ ಪಾಂಡ್ಯ 7, ಅರ್ಷದ್‌ ಖಾನ್‌ 5 ರನ್‌ ಬಾರಿಸಿ ಹೊರ ನಡೆದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೇ ಮತ್ತೊಂದೆಡೆ ಬ್ಯಾಟ್ ಬೀಸಿದ ನಾಯಕ ಕೆ.ಎಲ್. ರಾಹುಲ್ 39 ರನ್ ಗಳಿಸಿದರು. ಆಯುಶ್ ಬದೋನಿ 29 ರನ್‌ ಗಳಿಸಿದರೇ ಕೊನೆಯಲ್ಲಿ ನಿಕೋಲಸ್ ಪೂರನ್ 32 ಎಸೆತಗಳಲ್ಲಿ 2ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 45 ರನ್ ಸಿಡಿಸುವ ಮೂಲಕ ಸ್ಪರ್ಧಾತ್ಮಕ ಮೊತ್ತ ಗಳಿಸಲು ಪ್ರಯತ್ನಿಸಿದರು.

ಕೆಕೆಆರ್‌ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದರು. ಉಳಿದಂತೆ, ವೈಭವ್ ಅರೋರಾ, ಸುನಿಲ್ ನಾರಾಯಣ್, ವರುಣ್ ಚಕ್ರವರ್ತಿ ಮತ್ತು ರಸೇಲ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚದರು.

ಕೆಕೆಆರ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಕೆಕೆಆರ್‌ಗೆ ಪಿಲಿಪ್‌ ಸಾಲ್ಟ್‌ ಉತ್ತಮ ಆರಂಭ ಒದಗಿಸಿದರು. ಸಾಲ್ಟ್‌ ಓಟಾಗದೇ 47 ಎಸೆತಗಳಲ್ಲಿ 14ಬೌಂಡರಿ, 3 ಸಿಕ್ಸರ್‌ ಸಹಿತ 89 ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇವರಿಗೆ ಜೊತೆಯಾಗಿ ನಾಯಕ ಶ್ರೇಯಸ್‌ ಅಯ್ಯರ್‌ 38 ರನ್‌ ಬಾರಿಸಿದರು. ಉಳಿದಂತೆ ನರೈನ್‌ 6 ಹಾಗೂ ರಘುವಂಶಿ 7 ರನ್‌ ಬಾರಿಸಿದರು. ಕೇವಲ 2 ವಿಕೆಟ್‌ ಕಳೆದುಕೊಂಡು ತವರು ನೆಲದಲ್ಲಿ ಕೆಕೆಆರ್‌ ಗೆದ್ದು ಬೀಗಿತು.

ಪಂದ್ಯ ಶ್ರೇಷ್ಠ: ಪಿಲಿಪ್‌ ಸಾಲ್ಟ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago