ಮಂಗಳೂರು: ಕನ್ನಡ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಮದುವೆಯಾದ ಮೊದಲ ಬಾರಿಗೆ ತಮ್ಮ ಸೋದರ ಮಾವ ಸುನೀಲ್ ಶೆಟ್ಟಿ ಅವರ ಹುಟ್ಟೂರಾದ ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.
ಇಲ್ಲಿನ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅವರ ಪತ್ನಿ ಅಥಿಯಾ ಶೆಟ್ಟಿ ಜತೆಯಲ್ಲಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮುಲ್ಕಿಯ ಶಿಮಂತೂರು ಶ್ರೀ ಆದಿ ಜರ್ನಾಧನ ದೇವಾಲಯ ದರ್ಶನ, ಕಕ್ವಗುತ್ತು ಮೂಲನಾಗ ದೇವರ ದರ್ಶನ ಪಡೆದ ಬಳಿಕ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ವಿನಿಯೋಗಿಸಿದ್ದಾರೆ.
ಮೂಲತಃ ಮುಲ್ಕಿ ಮೂಲದವರಾದ ಸುನೀಶ್ ಶೆಟ್ಟಿ ಬಾಲಿವುಡ್ಗೆ ಎಂಟ್ರಿಕೊಟ್ಟು ಬಳಿಕ ಬಹಳ ದೊಡ್ಡ ಹೆಸರು ಮಾಡಿದರು. 2023ರ ಜನವರಿಯಲ್ಲಿ ಕೆ ಎಲ್ ರಾಹುಲ್ ಜತೆಯಲ್ಲಿ ಸುನೀಲ್ ಶೆಟ್ಟಿ ತಮ್ಮ ಮಗಳ ಮದುವೆ ಮಾಡಿದರು.
ಇದಾದ ಬಳಿಕ ಇದೇ ಮೊದಲ ಬಾರಿಗೆ ಕೆಎಲ್ ರಾಹುಲ್ ದಂಪತಿ ಮುಲ್ಕಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇನ್ನು ಕೆಎಲ್ ರಾಹುಲ್ ಕಂಡ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…