ಕ್ರೀಡೆ

ಆಸೀಸ್‌ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಆರಂಭಿಕರಾಗಿ ಜೈಸ್ವಾಲ್‌ – ಕೆಎಲ್‌ ರಾಹುಲ್‌ ಕಣಕ್ಕೆ: ರೋಹಿತ್‌ ಶರ್ಮಾ ಸ್ಪಷ್ಟನೆ

ಅಡಿಲೇಡ್:‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್‌ ಸರಣಿಯ ದ್ವೀತಿಯ ಪಂದ್ಯವು ಅಡಿಲೇಡ್‌ನ ಓವೆಲ್‌ ಮೈದಾನದಲ್ಲಿ ಶುಕ್ರವಾರ (ಡಿ.6) ಆರಂಭವಾಗಲಿದೆ. ಡೇ-ನೈಟ್‌‌ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಇಂಡಿಯಾದ ಪರ ಒಂದು ಕಡೆ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರೆ, ಮತ್ತೊಂದು ಕಡೆ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಈಗ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮಾಹಿತಿ ನೀಡುವ ಮೂಲಕ ಖಚಿತಪಡಿಸಿದ್ದಾರೆ.

ಪಿಂಕ್‌ಬಾಲ್‌ ಟೆಸ್ಟ್‌ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕರಾಗಿ ಆಡಿದ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌ ಅವರೇ ಈ ಟೆಸ್ಟ್‌ನಲ್ಲೂ ಕಣಕ್ಕಿಳೀಯಲಿದ್ದು ನಾನು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.

ಮೊದಲ ಟೆಸ್ಟನಲ್ಲಿ ರೋಹಿತ್‌ ಶರ್ಮಾ ಅಲಭ್ಯರಾಗಿದ್ದರು. ಅವರ ಗೈರುಹಾಜರಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್‌ ರಾಹುಲ್‌ ಪ್ರಥಮ ಟೆಸ್ಟ್‌ನಲ್ಲಿ ಒಟ್ಟು 103 ರನ್‌ ಗಳಿಸಿ ಭಾರತದ ಗೆಲುವಿಗೆ ಕಾಣಿಕೆ ನೀಡಿದರು.

ಈಗ ಎರಡನೇ ಟೆಸ್ಟ್‌ನಲ್ಲಿ ರೋಹಿತ್‌ ಶರ್ಮಾ ಆಡಲು ಸಜ್ಜಾಗಿದ್ದಾರೆ. ಆರಂಭಿಕ ಬ್ಯಾಟರ್‌ಗಳಾಗಿ ಪರ್ತ್‌ ಟೆಸ್ಟ್‌ನಲ್ಲಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್ ಯಶಸ್ಸಾದ ಕಾರಣ ಇವರು ಮಧ್ಯಮ ಕ್ರಮಾಂಕದಲ್ಲಿ ಆಡಲು ನಿರ್ಧರಿಸಿದ್ದಾರೆ.

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌ ಮೂರನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕದಲ್ಲಿ ರೋಹಿತ್‌ ಅಥವಾ ರಿಷಭ್‌ ಕಾಣಿಸಿಕೊಳ್ಳಲಿದ್ದಾರೆ.

andolana

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

10 hours ago