ಕ್ರೀಡೆ

ಆಸೀಸ್‌ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಆರಂಭಿಕರಾಗಿ ಜೈಸ್ವಾಲ್‌ – ಕೆಎಲ್‌ ರಾಹುಲ್‌ ಕಣಕ್ಕೆ: ರೋಹಿತ್‌ ಶರ್ಮಾ ಸ್ಪಷ್ಟನೆ

ಅಡಿಲೇಡ್:‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್‌ ಸರಣಿಯ ದ್ವೀತಿಯ ಪಂದ್ಯವು ಅಡಿಲೇಡ್‌ನ ಓವೆಲ್‌ ಮೈದಾನದಲ್ಲಿ ಶುಕ್ರವಾರ (ಡಿ.6) ಆರಂಭವಾಗಲಿದೆ. ಡೇ-ನೈಟ್‌‌ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಇಂಡಿಯಾದ ಪರ ಒಂದು ಕಡೆ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರೆ, ಮತ್ತೊಂದು ಕಡೆ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಈಗ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮಾಹಿತಿ ನೀಡುವ ಮೂಲಕ ಖಚಿತಪಡಿಸಿದ್ದಾರೆ.

ಪಿಂಕ್‌ಬಾಲ್‌ ಟೆಸ್ಟ್‌ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕರಾಗಿ ಆಡಿದ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌ ಅವರೇ ಈ ಟೆಸ್ಟ್‌ನಲ್ಲೂ ಕಣಕ್ಕಿಳೀಯಲಿದ್ದು ನಾನು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.

ಮೊದಲ ಟೆಸ್ಟನಲ್ಲಿ ರೋಹಿತ್‌ ಶರ್ಮಾ ಅಲಭ್ಯರಾಗಿದ್ದರು. ಅವರ ಗೈರುಹಾಜರಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್‌ ರಾಹುಲ್‌ ಪ್ರಥಮ ಟೆಸ್ಟ್‌ನಲ್ಲಿ ಒಟ್ಟು 103 ರನ್‌ ಗಳಿಸಿ ಭಾರತದ ಗೆಲುವಿಗೆ ಕಾಣಿಕೆ ನೀಡಿದರು.

ಈಗ ಎರಡನೇ ಟೆಸ್ಟ್‌ನಲ್ಲಿ ರೋಹಿತ್‌ ಶರ್ಮಾ ಆಡಲು ಸಜ್ಜಾಗಿದ್ದಾರೆ. ಆರಂಭಿಕ ಬ್ಯಾಟರ್‌ಗಳಾಗಿ ಪರ್ತ್‌ ಟೆಸ್ಟ್‌ನಲ್ಲಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್ ಯಶಸ್ಸಾದ ಕಾರಣ ಇವರು ಮಧ್ಯಮ ಕ್ರಮಾಂಕದಲ್ಲಿ ಆಡಲು ನಿರ್ಧರಿಸಿದ್ದಾರೆ.

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌ ಮೂರನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕದಲ್ಲಿ ರೋಹಿತ್‌ ಅಥವಾ ರಿಷಭ್‌ ಕಾಣಿಸಿಕೊಳ್ಳಲಿದ್ದಾರೆ.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago