ಕ್ರೀಡೆ

ಆಸೀಸ್‌ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಆರಂಭಿಕರಾಗಿ ಜೈಸ್ವಾಲ್‌ – ಕೆಎಲ್‌ ರಾಹುಲ್‌ ಕಣಕ್ಕೆ: ರೋಹಿತ್‌ ಶರ್ಮಾ ಸ್ಪಷ್ಟನೆ

ಅಡಿಲೇಡ್:‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್‌ ಸರಣಿಯ ದ್ವೀತಿಯ ಪಂದ್ಯವು ಅಡಿಲೇಡ್‌ನ ಓವೆಲ್‌ ಮೈದಾನದಲ್ಲಿ ಶುಕ್ರವಾರ (ಡಿ.6) ಆರಂಭವಾಗಲಿದೆ. ಡೇ-ನೈಟ್‌‌ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಇಂಡಿಯಾದ ಪರ ಒಂದು ಕಡೆ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರೆ, ಮತ್ತೊಂದು ಕಡೆ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಈಗ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮಾಹಿತಿ ನೀಡುವ ಮೂಲಕ ಖಚಿತಪಡಿಸಿದ್ದಾರೆ.

ಪಿಂಕ್‌ಬಾಲ್‌ ಟೆಸ್ಟ್‌ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕರಾಗಿ ಆಡಿದ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌ ಅವರೇ ಈ ಟೆಸ್ಟ್‌ನಲ್ಲೂ ಕಣಕ್ಕಿಳೀಯಲಿದ್ದು ನಾನು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.

ಮೊದಲ ಟೆಸ್ಟನಲ್ಲಿ ರೋಹಿತ್‌ ಶರ್ಮಾ ಅಲಭ್ಯರಾಗಿದ್ದರು. ಅವರ ಗೈರುಹಾಜರಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್‌ ರಾಹುಲ್‌ ಪ್ರಥಮ ಟೆಸ್ಟ್‌ನಲ್ಲಿ ಒಟ್ಟು 103 ರನ್‌ ಗಳಿಸಿ ಭಾರತದ ಗೆಲುವಿಗೆ ಕಾಣಿಕೆ ನೀಡಿದರು.

ಈಗ ಎರಡನೇ ಟೆಸ್ಟ್‌ನಲ್ಲಿ ರೋಹಿತ್‌ ಶರ್ಮಾ ಆಡಲು ಸಜ್ಜಾಗಿದ್ದಾರೆ. ಆರಂಭಿಕ ಬ್ಯಾಟರ್‌ಗಳಾಗಿ ಪರ್ತ್‌ ಟೆಸ್ಟ್‌ನಲ್ಲಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್ ಯಶಸ್ಸಾದ ಕಾರಣ ಇವರು ಮಧ್ಯಮ ಕ್ರಮಾಂಕದಲ್ಲಿ ಆಡಲು ನಿರ್ಧರಿಸಿದ್ದಾರೆ.

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌ ಮೂರನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕದಲ್ಲಿ ರೋಹಿತ್‌ ಅಥವಾ ರಿಷಭ್‌ ಕಾಣಿಸಿಕೊಳ್ಳಲಿದ್ದಾರೆ.

andolana

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

10 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

11 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

11 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

11 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

11 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

12 hours ago