ಕ್ರೀಡೆ

ಕೆ.ಎಲ್‌ ರಾಹುಲ್‌ ಹೋರಾಟ ವ್ಯರ್ಥ, ಸೋಲುವ ಪಂದ್ಯದಲ್ಲಿ ಗೆದ್ದ ಗುಜರಾತ್‌!

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು.

ಇಲ್ಲಿನ ಏಕನಾ ಸ್ಟೇಡಿಯಂನಲ್ಲಿ ಗುಜರಾತ್‌ ಟೈಟನ್ಸ್ ನೀಡಿದ್ದ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್ ತಂಡ ಸುಲಭವಾಗಿ ಗೆಲುವು ದಾಖಲಿಸಲಿದೆ ಎಂದು ಭಾವಿಸಲಾಗಿತ್ತು. ಅದರಂತೆ 6.3 ಓವರ್‌ಗಳಿಗೆ ಕೆ.ಎಲ್‌ ರಾಹುಲ್‌ ಹಾಗೂ ಕೈಲ್‌ ಮೇಯರ್ಸ್‌ ಜೋಡಿ 55 ರನ್‌ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟಿತ್ತು.

ಕೈಲ್‌ ಮೇಯರ್ಸ್‌ (24) ಹಾಗೂ ಕೃಣಾಲ್ ಪಾಂಡ್ಯ (23) ಸಿಕ್ಕ ಉತ್ತಮ ಆರಂಭದಲ್ಲಿ ಪಂದ್ಯ ಮುಗಿಸುವಲ್ಲಿ ಎಡವಿದರು. ಇದರ ಹೊರತಾಗಿಯೂ ಕೆಎಲ್‌ ರಾಹುಲ್‌ 61 ಎಸೆತಗಳಲ್ಲಿ 68 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ತಂದಿದ್ದರು. ಆದರೆ, ಡೆತ್‌ ಓವರ್‌ಗಳಲ್ಲಿ ಮೊಹಮ್ಮದ್‌ ಶಮಿ ಹಾಗೂ ಮೋಹಿತ್ ಶರ್ಮಾ ಶಿಸ್ತುಬದ್ದ ದಾಳಿಯ ಎದುರು ಪಂಜಾಬ್‌ ತೀವ್ರ ಹಿನ್ನಡೆ ಅನುಭವಿಸಿತು.

ಕೊನೆಯ 3 ಓವರ್‌ಗಳಲ್ಲಿ 23 ರನ್ ಅಗತ್ಯವಿದ್ದಾಗ 18ನೇ ಓವರ್‌ನಲ್ಲಿ ಮೋಹಿತ್‌ ಶರ್ಮಾ ಕೇವಲ 6 ರನ್‌ ಕೊಟ್ಟರೆ, 19ನೇ ಓವರ್‌ನಲ್ಲಿ ಮೊಹಮ್ಮದ್‌ ಶಮಿ ಕೇವಲ 5 ರನ್‌ಗೆ ಕೆ.ಎಲ್‌ ರಾಹುಲ್‌ ಪಡೆಯನ್ನು ನಿಯಂತ್ರಿಸಿದರು. ಆ ಮೂಲಕ ಕೊನೆಯ ಓವರ್‌ನಲ್ಲಿ 12 ರನ್‌ ಅಗತ್ಯವಿದ್ದಾಗ ಮೊಹಿತ್‌ ಶರ್ಮಾ, ಕೆ.ಎಲ್‌ ರಾಹುಲ್‌, ಮಾರ್ಕಸ್‌ ಸ್ಟೋಯ್ನಿಸ್‌ ಅವರನ್ನು ಔಟ್ ಮಾಡಿದರು. ಇದರ ಜೊತೆಗೆ ಆಯುಷ್‌ ಬದೋನಿ ಮತ್ತು ದೀಪಕ್‌ ಹೂಡ ರನ್‌ಔಟ್‌ ಆದರು. ಅಂತಿಮವಾಗಿ ಗುಜರಾತ್‌ ಟೈಟನ್ಸ್‌ 7 ರನ್‌ ರೋಚಕ ಗೆಲುವು ತನ್ನದಾಗಿಸಿಕೊಂಡಿತು. ಅದಹಾಗೆ ಲೋ ಸ್ಕೋರಿಂಗ್‌ ಪಂದ್ಯದ ಕೊನೆಯ 5 ಓವರ್‌ಗಳಿಗೆ ಕೇವಲ 19 ರನ್‌ ನೀಡಿದ ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಈ ಗೆಲುವಿನ ಶ್ರೇಯ ಸಲ್ಲಬೇಕು.

ಗುಜರಾತ್ ಟೈಟನ್ಸ್‌ ಪರ ನೂರ್ ಅಹ್ಮದ್‌ ಹಾಗೂ ಮೋಹಿತ್‌ ಶರ್ಮಾ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಕೇವಲ 3 ಓವರ್‌ಗಳಿಗೆ 17 ರನ್‌ ನೀಡಿ ಎರಡು ವಿಕೆಟ್‌ ಕಿತ್ತ ಮೋಹಿತ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್‌ ವಿವರ

ಗುಜರಾತ್‌ ಟೈಟನ್ಸ್‌: 20 ಓವರ್‌ಗಳಿಗೆ 135-6 (ಹಾರ್ದಿಕ್‌ ಪಾಂಡ್ಯ 66, ವೃದ್ದಿಮಾನ್ ಸಹಾ 47; ಕೃಣಾಲ್‌ ಪಾಂಡ್ಯ 16ಕ್ಕೆ 2, ಮಾರ್ಕಸ್‌ ಸ್ಟೋಯ್ನಿಸ್‌ 20ಕ್ಕೆ 2)

ಲಖನೌ ಸೂಪರ್‌ ಜಯಂಟ್ಸ್: 
20 ಓವರ್‌ಗಳಿಗೆ 128-7 (ಕೆ.ಎಲ್‌ ರಾಹುಲ್‌ 68, ಕೈಲ್‌ ಮೇಯರ್ಸ್‌ 24, ಕೃಣಾಲ್‌ ಪಾಂಡ್ಯ 23; ಮೋಹಿತ್‌ ಶರ್ಮಾ 17ಕ್ಕೆ 2, ನೂರ್‌ ಅಹ್ಮದ್‌ 18ಕ್ಕೆ 2)

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago