ಕ್ರೀಡೆ

ಕೆ.ಎಲ್‌ ರಾಹುಲ್‌ ಹೋರಾಟ ವ್ಯರ್ಥ, ಸೋಲುವ ಪಂದ್ಯದಲ್ಲಿ ಗೆದ್ದ ಗುಜರಾತ್‌!

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು.

ಇಲ್ಲಿನ ಏಕನಾ ಸ್ಟೇಡಿಯಂನಲ್ಲಿ ಗುಜರಾತ್‌ ಟೈಟನ್ಸ್ ನೀಡಿದ್ದ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್ ತಂಡ ಸುಲಭವಾಗಿ ಗೆಲುವು ದಾಖಲಿಸಲಿದೆ ಎಂದು ಭಾವಿಸಲಾಗಿತ್ತು. ಅದರಂತೆ 6.3 ಓವರ್‌ಗಳಿಗೆ ಕೆ.ಎಲ್‌ ರಾಹುಲ್‌ ಹಾಗೂ ಕೈಲ್‌ ಮೇಯರ್ಸ್‌ ಜೋಡಿ 55 ರನ್‌ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟಿತ್ತು.

ಕೈಲ್‌ ಮೇಯರ್ಸ್‌ (24) ಹಾಗೂ ಕೃಣಾಲ್ ಪಾಂಡ್ಯ (23) ಸಿಕ್ಕ ಉತ್ತಮ ಆರಂಭದಲ್ಲಿ ಪಂದ್ಯ ಮುಗಿಸುವಲ್ಲಿ ಎಡವಿದರು. ಇದರ ಹೊರತಾಗಿಯೂ ಕೆಎಲ್‌ ರಾಹುಲ್‌ 61 ಎಸೆತಗಳಲ್ಲಿ 68 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ತಂದಿದ್ದರು. ಆದರೆ, ಡೆತ್‌ ಓವರ್‌ಗಳಲ್ಲಿ ಮೊಹಮ್ಮದ್‌ ಶಮಿ ಹಾಗೂ ಮೋಹಿತ್ ಶರ್ಮಾ ಶಿಸ್ತುಬದ್ದ ದಾಳಿಯ ಎದುರು ಪಂಜಾಬ್‌ ತೀವ್ರ ಹಿನ್ನಡೆ ಅನುಭವಿಸಿತು.

ಕೊನೆಯ 3 ಓವರ್‌ಗಳಲ್ಲಿ 23 ರನ್ ಅಗತ್ಯವಿದ್ದಾಗ 18ನೇ ಓವರ್‌ನಲ್ಲಿ ಮೋಹಿತ್‌ ಶರ್ಮಾ ಕೇವಲ 6 ರನ್‌ ಕೊಟ್ಟರೆ, 19ನೇ ಓವರ್‌ನಲ್ಲಿ ಮೊಹಮ್ಮದ್‌ ಶಮಿ ಕೇವಲ 5 ರನ್‌ಗೆ ಕೆ.ಎಲ್‌ ರಾಹುಲ್‌ ಪಡೆಯನ್ನು ನಿಯಂತ್ರಿಸಿದರು. ಆ ಮೂಲಕ ಕೊನೆಯ ಓವರ್‌ನಲ್ಲಿ 12 ರನ್‌ ಅಗತ್ಯವಿದ್ದಾಗ ಮೊಹಿತ್‌ ಶರ್ಮಾ, ಕೆ.ಎಲ್‌ ರಾಹುಲ್‌, ಮಾರ್ಕಸ್‌ ಸ್ಟೋಯ್ನಿಸ್‌ ಅವರನ್ನು ಔಟ್ ಮಾಡಿದರು. ಇದರ ಜೊತೆಗೆ ಆಯುಷ್‌ ಬದೋನಿ ಮತ್ತು ದೀಪಕ್‌ ಹೂಡ ರನ್‌ಔಟ್‌ ಆದರು. ಅಂತಿಮವಾಗಿ ಗುಜರಾತ್‌ ಟೈಟನ್ಸ್‌ 7 ರನ್‌ ರೋಚಕ ಗೆಲುವು ತನ್ನದಾಗಿಸಿಕೊಂಡಿತು. ಅದಹಾಗೆ ಲೋ ಸ್ಕೋರಿಂಗ್‌ ಪಂದ್ಯದ ಕೊನೆಯ 5 ಓವರ್‌ಗಳಿಗೆ ಕೇವಲ 19 ರನ್‌ ನೀಡಿದ ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಈ ಗೆಲುವಿನ ಶ್ರೇಯ ಸಲ್ಲಬೇಕು.

ಗುಜರಾತ್ ಟೈಟನ್ಸ್‌ ಪರ ನೂರ್ ಅಹ್ಮದ್‌ ಹಾಗೂ ಮೋಹಿತ್‌ ಶರ್ಮಾ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಕೇವಲ 3 ಓವರ್‌ಗಳಿಗೆ 17 ರನ್‌ ನೀಡಿ ಎರಡು ವಿಕೆಟ್‌ ಕಿತ್ತ ಮೋಹಿತ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್‌ ವಿವರ

ಗುಜರಾತ್‌ ಟೈಟನ್ಸ್‌: 20 ಓವರ್‌ಗಳಿಗೆ 135-6 (ಹಾರ್ದಿಕ್‌ ಪಾಂಡ್ಯ 66, ವೃದ್ದಿಮಾನ್ ಸಹಾ 47; ಕೃಣಾಲ್‌ ಪಾಂಡ್ಯ 16ಕ್ಕೆ 2, ಮಾರ್ಕಸ್‌ ಸ್ಟೋಯ್ನಿಸ್‌ 20ಕ್ಕೆ 2)

ಲಖನೌ ಸೂಪರ್‌ ಜಯಂಟ್ಸ್: 
20 ಓವರ್‌ಗಳಿಗೆ 128-7 (ಕೆ.ಎಲ್‌ ರಾಹುಲ್‌ 68, ಕೈಲ್‌ ಮೇಯರ್ಸ್‌ 24, ಕೃಣಾಲ್‌ ಪಾಂಡ್ಯ 23; ಮೋಹಿತ್‌ ಶರ್ಮಾ 17ಕ್ಕೆ 2, ನೂರ್‌ ಅಹ್ಮದ್‌ 18ಕ್ಕೆ 2)

andolanait

Recent Posts

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

9 mins ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

1 hour ago

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

2 hours ago

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

5 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

5 hours ago