ಕ್ರೀಡೆ

ಕೆ.ಎಲ್‌ ರಾಹುಲ್‌ ಹೋರಾಟ ವ್ಯರ್ಥ, ಸೋಲುವ ಪಂದ್ಯದಲ್ಲಿ ಗೆದ್ದ ಗುಜರಾತ್‌!

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು.

ಇಲ್ಲಿನ ಏಕನಾ ಸ್ಟೇಡಿಯಂನಲ್ಲಿ ಗುಜರಾತ್‌ ಟೈಟನ್ಸ್ ನೀಡಿದ್ದ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್ ತಂಡ ಸುಲಭವಾಗಿ ಗೆಲುವು ದಾಖಲಿಸಲಿದೆ ಎಂದು ಭಾವಿಸಲಾಗಿತ್ತು. ಅದರಂತೆ 6.3 ಓವರ್‌ಗಳಿಗೆ ಕೆ.ಎಲ್‌ ರಾಹುಲ್‌ ಹಾಗೂ ಕೈಲ್‌ ಮೇಯರ್ಸ್‌ ಜೋಡಿ 55 ರನ್‌ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟಿತ್ತು.

ಕೈಲ್‌ ಮೇಯರ್ಸ್‌ (24) ಹಾಗೂ ಕೃಣಾಲ್ ಪಾಂಡ್ಯ (23) ಸಿಕ್ಕ ಉತ್ತಮ ಆರಂಭದಲ್ಲಿ ಪಂದ್ಯ ಮುಗಿಸುವಲ್ಲಿ ಎಡವಿದರು. ಇದರ ಹೊರತಾಗಿಯೂ ಕೆಎಲ್‌ ರಾಹುಲ್‌ 61 ಎಸೆತಗಳಲ್ಲಿ 68 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ತಂದಿದ್ದರು. ಆದರೆ, ಡೆತ್‌ ಓವರ್‌ಗಳಲ್ಲಿ ಮೊಹಮ್ಮದ್‌ ಶಮಿ ಹಾಗೂ ಮೋಹಿತ್ ಶರ್ಮಾ ಶಿಸ್ತುಬದ್ದ ದಾಳಿಯ ಎದುರು ಪಂಜಾಬ್‌ ತೀವ್ರ ಹಿನ್ನಡೆ ಅನುಭವಿಸಿತು.

ಕೊನೆಯ 3 ಓವರ್‌ಗಳಲ್ಲಿ 23 ರನ್ ಅಗತ್ಯವಿದ್ದಾಗ 18ನೇ ಓವರ್‌ನಲ್ಲಿ ಮೋಹಿತ್‌ ಶರ್ಮಾ ಕೇವಲ 6 ರನ್‌ ಕೊಟ್ಟರೆ, 19ನೇ ಓವರ್‌ನಲ್ಲಿ ಮೊಹಮ್ಮದ್‌ ಶಮಿ ಕೇವಲ 5 ರನ್‌ಗೆ ಕೆ.ಎಲ್‌ ರಾಹುಲ್‌ ಪಡೆಯನ್ನು ನಿಯಂತ್ರಿಸಿದರು. ಆ ಮೂಲಕ ಕೊನೆಯ ಓವರ್‌ನಲ್ಲಿ 12 ರನ್‌ ಅಗತ್ಯವಿದ್ದಾಗ ಮೊಹಿತ್‌ ಶರ್ಮಾ, ಕೆ.ಎಲ್‌ ರಾಹುಲ್‌, ಮಾರ್ಕಸ್‌ ಸ್ಟೋಯ್ನಿಸ್‌ ಅವರನ್ನು ಔಟ್ ಮಾಡಿದರು. ಇದರ ಜೊತೆಗೆ ಆಯುಷ್‌ ಬದೋನಿ ಮತ್ತು ದೀಪಕ್‌ ಹೂಡ ರನ್‌ಔಟ್‌ ಆದರು. ಅಂತಿಮವಾಗಿ ಗುಜರಾತ್‌ ಟೈಟನ್ಸ್‌ 7 ರನ್‌ ರೋಚಕ ಗೆಲುವು ತನ್ನದಾಗಿಸಿಕೊಂಡಿತು. ಅದಹಾಗೆ ಲೋ ಸ್ಕೋರಿಂಗ್‌ ಪಂದ್ಯದ ಕೊನೆಯ 5 ಓವರ್‌ಗಳಿಗೆ ಕೇವಲ 19 ರನ್‌ ನೀಡಿದ ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಈ ಗೆಲುವಿನ ಶ್ರೇಯ ಸಲ್ಲಬೇಕು.

ಗುಜರಾತ್ ಟೈಟನ್ಸ್‌ ಪರ ನೂರ್ ಅಹ್ಮದ್‌ ಹಾಗೂ ಮೋಹಿತ್‌ ಶರ್ಮಾ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಕೇವಲ 3 ಓವರ್‌ಗಳಿಗೆ 17 ರನ್‌ ನೀಡಿ ಎರಡು ವಿಕೆಟ್‌ ಕಿತ್ತ ಮೋಹಿತ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್‌ ವಿವರ

ಗುಜರಾತ್‌ ಟೈಟನ್ಸ್‌: 20 ಓವರ್‌ಗಳಿಗೆ 135-6 (ಹಾರ್ದಿಕ್‌ ಪಾಂಡ್ಯ 66, ವೃದ್ದಿಮಾನ್ ಸಹಾ 47; ಕೃಣಾಲ್‌ ಪಾಂಡ್ಯ 16ಕ್ಕೆ 2, ಮಾರ್ಕಸ್‌ ಸ್ಟೋಯ್ನಿಸ್‌ 20ಕ್ಕೆ 2)

ಲಖನೌ ಸೂಪರ್‌ ಜಯಂಟ್ಸ್: 
20 ಓವರ್‌ಗಳಿಗೆ 128-7 (ಕೆ.ಎಲ್‌ ರಾಹುಲ್‌ 68, ಕೈಲ್‌ ಮೇಯರ್ಸ್‌ 24, ಕೃಣಾಲ್‌ ಪಾಂಡ್ಯ 23; ಮೋಹಿತ್‌ ಶರ್ಮಾ 17ಕ್ಕೆ 2, ನೂರ್‌ ಅಹ್ಮದ್‌ 18ಕ್ಕೆ 2)

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago