ಕ್ರೀಡೆ

ಕೆ.ಎಲ್‌ ರಾಹುಲ್‌ ಹೋರಾಟ ವ್ಯರ್ಥ, ಸೋಲುವ ಪಂದ್ಯದಲ್ಲಿ ಗೆದ್ದ ಗುಜರಾತ್‌!

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು.

ಇಲ್ಲಿನ ಏಕನಾ ಸ್ಟೇಡಿಯಂನಲ್ಲಿ ಗುಜರಾತ್‌ ಟೈಟನ್ಸ್ ನೀಡಿದ್ದ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್ ತಂಡ ಸುಲಭವಾಗಿ ಗೆಲುವು ದಾಖಲಿಸಲಿದೆ ಎಂದು ಭಾವಿಸಲಾಗಿತ್ತು. ಅದರಂತೆ 6.3 ಓವರ್‌ಗಳಿಗೆ ಕೆ.ಎಲ್‌ ರಾಹುಲ್‌ ಹಾಗೂ ಕೈಲ್‌ ಮೇಯರ್ಸ್‌ ಜೋಡಿ 55 ರನ್‌ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟಿತ್ತು.

ಕೈಲ್‌ ಮೇಯರ್ಸ್‌ (24) ಹಾಗೂ ಕೃಣಾಲ್ ಪಾಂಡ್ಯ (23) ಸಿಕ್ಕ ಉತ್ತಮ ಆರಂಭದಲ್ಲಿ ಪಂದ್ಯ ಮುಗಿಸುವಲ್ಲಿ ಎಡವಿದರು. ಇದರ ಹೊರತಾಗಿಯೂ ಕೆಎಲ್‌ ರಾಹುಲ್‌ 61 ಎಸೆತಗಳಲ್ಲಿ 68 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ತಂದಿದ್ದರು. ಆದರೆ, ಡೆತ್‌ ಓವರ್‌ಗಳಲ್ಲಿ ಮೊಹಮ್ಮದ್‌ ಶಮಿ ಹಾಗೂ ಮೋಹಿತ್ ಶರ್ಮಾ ಶಿಸ್ತುಬದ್ದ ದಾಳಿಯ ಎದುರು ಪಂಜಾಬ್‌ ತೀವ್ರ ಹಿನ್ನಡೆ ಅನುಭವಿಸಿತು.

ಕೊನೆಯ 3 ಓವರ್‌ಗಳಲ್ಲಿ 23 ರನ್ ಅಗತ್ಯವಿದ್ದಾಗ 18ನೇ ಓವರ್‌ನಲ್ಲಿ ಮೋಹಿತ್‌ ಶರ್ಮಾ ಕೇವಲ 6 ರನ್‌ ಕೊಟ್ಟರೆ, 19ನೇ ಓವರ್‌ನಲ್ಲಿ ಮೊಹಮ್ಮದ್‌ ಶಮಿ ಕೇವಲ 5 ರನ್‌ಗೆ ಕೆ.ಎಲ್‌ ರಾಹುಲ್‌ ಪಡೆಯನ್ನು ನಿಯಂತ್ರಿಸಿದರು. ಆ ಮೂಲಕ ಕೊನೆಯ ಓವರ್‌ನಲ್ಲಿ 12 ರನ್‌ ಅಗತ್ಯವಿದ್ದಾಗ ಮೊಹಿತ್‌ ಶರ್ಮಾ, ಕೆ.ಎಲ್‌ ರಾಹುಲ್‌, ಮಾರ್ಕಸ್‌ ಸ್ಟೋಯ್ನಿಸ್‌ ಅವರನ್ನು ಔಟ್ ಮಾಡಿದರು. ಇದರ ಜೊತೆಗೆ ಆಯುಷ್‌ ಬದೋನಿ ಮತ್ತು ದೀಪಕ್‌ ಹೂಡ ರನ್‌ಔಟ್‌ ಆದರು. ಅಂತಿಮವಾಗಿ ಗುಜರಾತ್‌ ಟೈಟನ್ಸ್‌ 7 ರನ್‌ ರೋಚಕ ಗೆಲುವು ತನ್ನದಾಗಿಸಿಕೊಂಡಿತು. ಅದಹಾಗೆ ಲೋ ಸ್ಕೋರಿಂಗ್‌ ಪಂದ್ಯದ ಕೊನೆಯ 5 ಓವರ್‌ಗಳಿಗೆ ಕೇವಲ 19 ರನ್‌ ನೀಡಿದ ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಈ ಗೆಲುವಿನ ಶ್ರೇಯ ಸಲ್ಲಬೇಕು.

ಗುಜರಾತ್ ಟೈಟನ್ಸ್‌ ಪರ ನೂರ್ ಅಹ್ಮದ್‌ ಹಾಗೂ ಮೋಹಿತ್‌ ಶರ್ಮಾ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಕೇವಲ 3 ಓವರ್‌ಗಳಿಗೆ 17 ರನ್‌ ನೀಡಿ ಎರಡು ವಿಕೆಟ್‌ ಕಿತ್ತ ಮೋಹಿತ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್‌ ವಿವರ

ಗುಜರಾತ್‌ ಟೈಟನ್ಸ್‌: 20 ಓವರ್‌ಗಳಿಗೆ 135-6 (ಹಾರ್ದಿಕ್‌ ಪಾಂಡ್ಯ 66, ವೃದ್ದಿಮಾನ್ ಸಹಾ 47; ಕೃಣಾಲ್‌ ಪಾಂಡ್ಯ 16ಕ್ಕೆ 2, ಮಾರ್ಕಸ್‌ ಸ್ಟೋಯ್ನಿಸ್‌ 20ಕ್ಕೆ 2)

ಲಖನೌ ಸೂಪರ್‌ ಜಯಂಟ್ಸ್: 
20 ಓವರ್‌ಗಳಿಗೆ 128-7 (ಕೆ.ಎಲ್‌ ರಾಹುಲ್‌ 68, ಕೈಲ್‌ ಮೇಯರ್ಸ್‌ 24, ಕೃಣಾಲ್‌ ಪಾಂಡ್ಯ 23; ಮೋಹಿತ್‌ ಶರ್ಮಾ 17ಕ್ಕೆ 2, ನೂರ್‌ ಅಹ್ಮದ್‌ 18ಕ್ಕೆ 2)

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago