ಕ್ರೀಡೆ

ಕೆ.ಎಲ್‌ ರಾಹುಲ್‌ ಹೋರಾಟ ವ್ಯರ್ಥ, ಸೋಲುವ ಪಂದ್ಯದಲ್ಲಿ ಗೆದ್ದ ಗುಜರಾತ್‌!

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು.

ಇಲ್ಲಿನ ಏಕನಾ ಸ್ಟೇಡಿಯಂನಲ್ಲಿ ಗುಜರಾತ್‌ ಟೈಟನ್ಸ್ ನೀಡಿದ್ದ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್ ತಂಡ ಸುಲಭವಾಗಿ ಗೆಲುವು ದಾಖಲಿಸಲಿದೆ ಎಂದು ಭಾವಿಸಲಾಗಿತ್ತು. ಅದರಂತೆ 6.3 ಓವರ್‌ಗಳಿಗೆ ಕೆ.ಎಲ್‌ ರಾಹುಲ್‌ ಹಾಗೂ ಕೈಲ್‌ ಮೇಯರ್ಸ್‌ ಜೋಡಿ 55 ರನ್‌ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟಿತ್ತು.

ಕೈಲ್‌ ಮೇಯರ್ಸ್‌ (24) ಹಾಗೂ ಕೃಣಾಲ್ ಪಾಂಡ್ಯ (23) ಸಿಕ್ಕ ಉತ್ತಮ ಆರಂಭದಲ್ಲಿ ಪಂದ್ಯ ಮುಗಿಸುವಲ್ಲಿ ಎಡವಿದರು. ಇದರ ಹೊರತಾಗಿಯೂ ಕೆಎಲ್‌ ರಾಹುಲ್‌ 61 ಎಸೆತಗಳಲ್ಲಿ 68 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ತಂದಿದ್ದರು. ಆದರೆ, ಡೆತ್‌ ಓವರ್‌ಗಳಲ್ಲಿ ಮೊಹಮ್ಮದ್‌ ಶಮಿ ಹಾಗೂ ಮೋಹಿತ್ ಶರ್ಮಾ ಶಿಸ್ತುಬದ್ದ ದಾಳಿಯ ಎದುರು ಪಂಜಾಬ್‌ ತೀವ್ರ ಹಿನ್ನಡೆ ಅನುಭವಿಸಿತು.

ಕೊನೆಯ 3 ಓವರ್‌ಗಳಲ್ಲಿ 23 ರನ್ ಅಗತ್ಯವಿದ್ದಾಗ 18ನೇ ಓವರ್‌ನಲ್ಲಿ ಮೋಹಿತ್‌ ಶರ್ಮಾ ಕೇವಲ 6 ರನ್‌ ಕೊಟ್ಟರೆ, 19ನೇ ಓವರ್‌ನಲ್ಲಿ ಮೊಹಮ್ಮದ್‌ ಶಮಿ ಕೇವಲ 5 ರನ್‌ಗೆ ಕೆ.ಎಲ್‌ ರಾಹುಲ್‌ ಪಡೆಯನ್ನು ನಿಯಂತ್ರಿಸಿದರು. ಆ ಮೂಲಕ ಕೊನೆಯ ಓವರ್‌ನಲ್ಲಿ 12 ರನ್‌ ಅಗತ್ಯವಿದ್ದಾಗ ಮೊಹಿತ್‌ ಶರ್ಮಾ, ಕೆ.ಎಲ್‌ ರಾಹುಲ್‌, ಮಾರ್ಕಸ್‌ ಸ್ಟೋಯ್ನಿಸ್‌ ಅವರನ್ನು ಔಟ್ ಮಾಡಿದರು. ಇದರ ಜೊತೆಗೆ ಆಯುಷ್‌ ಬದೋನಿ ಮತ್ತು ದೀಪಕ್‌ ಹೂಡ ರನ್‌ಔಟ್‌ ಆದರು. ಅಂತಿಮವಾಗಿ ಗುಜರಾತ್‌ ಟೈಟನ್ಸ್‌ 7 ರನ್‌ ರೋಚಕ ಗೆಲುವು ತನ್ನದಾಗಿಸಿಕೊಂಡಿತು. ಅದಹಾಗೆ ಲೋ ಸ್ಕೋರಿಂಗ್‌ ಪಂದ್ಯದ ಕೊನೆಯ 5 ಓವರ್‌ಗಳಿಗೆ ಕೇವಲ 19 ರನ್‌ ನೀಡಿದ ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಈ ಗೆಲುವಿನ ಶ್ರೇಯ ಸಲ್ಲಬೇಕು.

ಗುಜರಾತ್ ಟೈಟನ್ಸ್‌ ಪರ ನೂರ್ ಅಹ್ಮದ್‌ ಹಾಗೂ ಮೋಹಿತ್‌ ಶರ್ಮಾ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಕೇವಲ 3 ಓವರ್‌ಗಳಿಗೆ 17 ರನ್‌ ನೀಡಿ ಎರಡು ವಿಕೆಟ್‌ ಕಿತ್ತ ಮೋಹಿತ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್‌ ವಿವರ

ಗುಜರಾತ್‌ ಟೈಟನ್ಸ್‌: 20 ಓವರ್‌ಗಳಿಗೆ 135-6 (ಹಾರ್ದಿಕ್‌ ಪಾಂಡ್ಯ 66, ವೃದ್ದಿಮಾನ್ ಸಹಾ 47; ಕೃಣಾಲ್‌ ಪಾಂಡ್ಯ 16ಕ್ಕೆ 2, ಮಾರ್ಕಸ್‌ ಸ್ಟೋಯ್ನಿಸ್‌ 20ಕ್ಕೆ 2)

ಲಖನೌ ಸೂಪರ್‌ ಜಯಂಟ್ಸ್: 
20 ಓವರ್‌ಗಳಿಗೆ 128-7 (ಕೆ.ಎಲ್‌ ರಾಹುಲ್‌ 68, ಕೈಲ್‌ ಮೇಯರ್ಸ್‌ 24, ಕೃಣಾಲ್‌ ಪಾಂಡ್ಯ 23; ಮೋಹಿತ್‌ ಶರ್ಮಾ 17ಕ್ಕೆ 2, ನೂರ್‌ ಅಹ್ಮದ್‌ 18ಕ್ಕೆ 2)

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

1 hour ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

5 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago