ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್

ಖoಡ್ಲಾ: ಟೀಮ್ ಇಂಡಿಯಾದ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟಿ ಆಥಿಯಾ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ  ಖಂಡಾಲಾದಲ್ಲಿರುವ ನಟ ಸುನೀಲ್ ಶೆಟ್ಟಿ ಅವರ ಫಾರ್ಮ್​ ಹೌಸ್​ನಲ್ಲಿ ತಾರಾ ಜೋಡಿ ಶುಭ ಮುಹೂರ್ತದಲ್ಲಿ ವಿವಾಹವಾದರು. 

ಈ ಶುಭಘಳಿಗೆಯನ್ನು ಉಭಯ ಕುಟುಂಬಗಳ ಆಪ್ತರು ಕಣ್ತುಂಬಿಕೊಂಡರು. ವಿಶೇಷವಾಗಿ ಬಾಲಿವುಡ್​ನ ಕೆಲ ಸೆಲೆಬ್ರಿಟಿ ಹಾಗೂ ಕೆಲ ಕ್ರಿಕೆಟಿಗರು ತಾರಾ ಜೋಡಿಯ ವಿವಾಹಕ್ಕೆ ಸಾಕ್ಷಿಯಾದರು.

ಹೊಸ ಜೀವನಕ್ಕೆ ಕಾಲಿಟ್ಟಿರುವ ನವಜೋಡಿಯು ಮುಂಬೈನಲ್ಲಿ ಆರಕ್ಷತೆ ಏರ್ಪಡಿಸಲಿದೆ. ಈ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ಆಟಗಾರರು ಸೇರಿದಂತೆ, ಬಾಲಿವುಡ್​ನ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮಗಳಾದ ಆಥಿಯಾ ಅವರನ್ನು ಕೆಎಲ್ ರಾಹುಲ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಎರಡೂ ಕುಟುಂಬಸ್ಥರು ನಿರ್ಧರಿಸಿದ ಮುಹೂರ್ತದಲ್ಲಿ ಪ್ರೇಮ ಪಕ್ಷಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಪ್ರಣಯ ಪಕ್ಷಿಗಳಾಗಿದ್ದಾರೆ.

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ತಂಡಕ್ಕೆ ಮರಳಲಿದ್ದಾರೆ.

andolanait

Recent Posts

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

3 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

54 mins ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

2 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

2 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

3 hours ago