ಕ್ರೀಡೆ

ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಮಾನ್ಯತೆ ಪಡೆದ ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ

ಮಡಿಕೇರಿ: ೨೪ ವರ್ಷಗಳಿಂದ ಕೊಡವರು ವಾತ್ರವಲ್ಲದೆ ಕೊಡಗಿನ ಜನತೆ, ಹಾಕಿ ಪ್ರೇಮಿಗಳು, ಕ್ರೀಡಾಭಿವಾನಿಗಳು ನಿರೀಕ್ಷೆ ವಾಡಿದ್ದ ಕನಸು ಈಗ ನನಸಾಗಿದೆ. ಹೌದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸುಮಾರು ಒಂದು ತಿಂಗಳಿನಿಂದ ನಡೆದ ಹಾಕಿ ಪಂದ್ಯಾವಳಿಯ ಅಂತಿಮ ದಿನ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಮಾನ್ಯತೆ ದೊರೆತಿದೆ.

೨೪ ವರ್ಷಗಳ ಹಿಂದೆ ಕರಡ ಗ್ರಾಮದ ಪಾಂಡಂಡ ಕುಟ್ಟಪ್ಪ ಮತ್ತು ಕಾಶಿ ಸಹೋದರರು ಕೊಡವರ ಹಾಕಿ ಪಂದ್ಯಾವಳಿಯ ಕನಸು ಕಂಡು ಅದನ್ನು ಸಾಕಾರಗೊಳಿಸಿದ ನಂತರ ಕೊಡವ ಕೌಟುಂಬಿಕ ಹಾಕಿಗೆ ರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯ ಮಾನ್ಯತೆ ದೊರಕಿತ್ತು. ಬಳಿಕ ಕುಟುಂಬ ತಂಡಗಳು ಕೊಡವ ಕೌಟುಂಬಿಕ ಹಾಕಿ ಹಬ್ಬವನ್ನು ಮುಂದುವರಿಸಿಕೊಂಡು ಬಂದಿದ್ದರು.

ಪ್ರತಿ ವರ್ಷ ಕೊಡವ ಕುಟುಂಬದವರು ವಾತ್ರವಲ್ಲದೆ, ಇತರ ಕ್ರೀಡಾಭಿವಾನಿಗಳು ಕೂಡ ಹಾಕಿ ಪಂದ್ಯಾವಳಿ ವೀಕ್ಷಿಸುತ್ತಿದ್ದರು. ಹಬ್ಬದಂತೆ ಒಂದು ಕ್ರೀಡೆಯನ್ನು ಆಡಬಹುದು ಎಂಬುದಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ ಸಾಕ್ಷಿಯಾಗಿತ್ತು. ಇದೀಗ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್‌ನವರು ಕೂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ವಿಶ್ವದಲ್ಲಿ ಒಂದೇ ಮೈದಾನದಲ್ಲಿ ಒಂದೇ ಸಮುದಾಯದವರು ಅತಿ ಹೆಚ್ಚು ತಂಡಗಳ ಮೂಲಕ ಅತಿ ಹೆಚ್ಚು ದಿನಗಳು ಆಡುವ ಕ್ರೀಡೆ ಎಂಬ ದಾಖಲೆಯ ಮಾನ್ಯತೆ ನೀಡಿದ್ದಾರೆ.

ಕೊಡವ ಜನಾಂಗದಲ್ಲಿ ಹಾಕಿ ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಡವ ಕುಟುಂಬಗಳ ನಡುವೇ ಹಾಕಿ ಪಂದ್ಯಾಟವನ್ನು ೨೪ ವರ್ಷಗಳಿಂದ ಆಯೋಜಿಸುತ್ತಾ ಬರಲಾಗಿದ್ದು, ಈ ವರ್ಷ ೨ ಕೋಟಿ ರೂ. ವೆಚ್ಚದಲ್ಲಿ ಕುಂಡ್ಯೋಳಂಡ ಕುಟುಂಬಸ್ಥರು ಪಂದ್ಯಾವಳಿ ಆಯೋಜಿಸಿದ್ದರು. ಅಲ್ಲದೆ, ಪಂದ್ಯಾಟದಲ್ಲಿ ದಾಖಲೆಯ 360 ಕುಟುಂಬ ತಂಡಗಳ 3 ಸಾವಿರಕ್ಕೂ ಅಧಿಕ ಆಟಗಾರರು ಪಾಲ್ಗೊಂಡಿದ್ದರು. ಪಂದ್ಯಾವಳಿ ವೀಕ್ಷಿಸಿದ ಗಿನ್ನೀಸ್ ರೆಕಾಡ್ಸ್ ಸಂಸ್ಥೆಯು ಸದಸ್ಯ ಸೆಪ್ನಿಲ್ ಅವರು ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಗಿನ್ನೀಸ್ ರೆಕಾರ್ಡ್ ವಾನ್ಯತೆ ನೀಡಿದ್ದು ವಿಶೇಷವಾಗಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

8 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago