ಕ್ರೀಡೆ

ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಮಾನ್ಯತೆ ಪಡೆದ ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ

ಮಡಿಕೇರಿ: ೨೪ ವರ್ಷಗಳಿಂದ ಕೊಡವರು ವಾತ್ರವಲ್ಲದೆ ಕೊಡಗಿನ ಜನತೆ, ಹಾಕಿ ಪ್ರೇಮಿಗಳು, ಕ್ರೀಡಾಭಿವಾನಿಗಳು ನಿರೀಕ್ಷೆ ವಾಡಿದ್ದ ಕನಸು ಈಗ ನನಸಾಗಿದೆ. ಹೌದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸುಮಾರು ಒಂದು ತಿಂಗಳಿನಿಂದ ನಡೆದ ಹಾಕಿ ಪಂದ್ಯಾವಳಿಯ ಅಂತಿಮ ದಿನ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಮಾನ್ಯತೆ ದೊರೆತಿದೆ.

೨೪ ವರ್ಷಗಳ ಹಿಂದೆ ಕರಡ ಗ್ರಾಮದ ಪಾಂಡಂಡ ಕುಟ್ಟಪ್ಪ ಮತ್ತು ಕಾಶಿ ಸಹೋದರರು ಕೊಡವರ ಹಾಕಿ ಪಂದ್ಯಾವಳಿಯ ಕನಸು ಕಂಡು ಅದನ್ನು ಸಾಕಾರಗೊಳಿಸಿದ ನಂತರ ಕೊಡವ ಕೌಟುಂಬಿಕ ಹಾಕಿಗೆ ರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯ ಮಾನ್ಯತೆ ದೊರಕಿತ್ತು. ಬಳಿಕ ಕುಟುಂಬ ತಂಡಗಳು ಕೊಡವ ಕೌಟುಂಬಿಕ ಹಾಕಿ ಹಬ್ಬವನ್ನು ಮುಂದುವರಿಸಿಕೊಂಡು ಬಂದಿದ್ದರು.

ಪ್ರತಿ ವರ್ಷ ಕೊಡವ ಕುಟುಂಬದವರು ವಾತ್ರವಲ್ಲದೆ, ಇತರ ಕ್ರೀಡಾಭಿವಾನಿಗಳು ಕೂಡ ಹಾಕಿ ಪಂದ್ಯಾವಳಿ ವೀಕ್ಷಿಸುತ್ತಿದ್ದರು. ಹಬ್ಬದಂತೆ ಒಂದು ಕ್ರೀಡೆಯನ್ನು ಆಡಬಹುದು ಎಂಬುದಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ ಸಾಕ್ಷಿಯಾಗಿತ್ತು. ಇದೀಗ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್‌ನವರು ಕೂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ವಿಶ್ವದಲ್ಲಿ ಒಂದೇ ಮೈದಾನದಲ್ಲಿ ಒಂದೇ ಸಮುದಾಯದವರು ಅತಿ ಹೆಚ್ಚು ತಂಡಗಳ ಮೂಲಕ ಅತಿ ಹೆಚ್ಚು ದಿನಗಳು ಆಡುವ ಕ್ರೀಡೆ ಎಂಬ ದಾಖಲೆಯ ಮಾನ್ಯತೆ ನೀಡಿದ್ದಾರೆ.

ಕೊಡವ ಜನಾಂಗದಲ್ಲಿ ಹಾಕಿ ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಡವ ಕುಟುಂಬಗಳ ನಡುವೇ ಹಾಕಿ ಪಂದ್ಯಾಟವನ್ನು ೨೪ ವರ್ಷಗಳಿಂದ ಆಯೋಜಿಸುತ್ತಾ ಬರಲಾಗಿದ್ದು, ಈ ವರ್ಷ ೨ ಕೋಟಿ ರೂ. ವೆಚ್ಚದಲ್ಲಿ ಕುಂಡ್ಯೋಳಂಡ ಕುಟುಂಬಸ್ಥರು ಪಂದ್ಯಾವಳಿ ಆಯೋಜಿಸಿದ್ದರು. ಅಲ್ಲದೆ, ಪಂದ್ಯಾಟದಲ್ಲಿ ದಾಖಲೆಯ 360 ಕುಟುಂಬ ತಂಡಗಳ 3 ಸಾವಿರಕ್ಕೂ ಅಧಿಕ ಆಟಗಾರರು ಪಾಲ್ಗೊಂಡಿದ್ದರು. ಪಂದ್ಯಾವಳಿ ವೀಕ್ಷಿಸಿದ ಗಿನ್ನೀಸ್ ರೆಕಾಡ್ಸ್ ಸಂಸ್ಥೆಯು ಸದಸ್ಯ ಸೆಪ್ನಿಲ್ ಅವರು ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಗಿನ್ನೀಸ್ ರೆಕಾರ್ಡ್ ವಾನ್ಯತೆ ನೀಡಿದ್ದು ವಿಶೇಷವಾಗಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

36 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

39 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

41 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

44 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

55 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

59 mins ago