ಕ್ರೀಡೆ

ಆಸೀಸ್‌ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ಗೆ ಡಿಕ್ಕಿ ಹೊಡೆದ ವಿರಾಟ್‌ ಕೊಹ್ಲಿಗೆ ದಂಡ

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ.

ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಯುವ ಆಟಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ಒಂದು ಡಿಮೆರಿಟ್‌ ಪಾಯಿಂಟ್‌ ನೀಡಲಾಗಿದೆ.

ಐಸಿಸಿ ನಿಯಮದ ಪ್ರಕಾರ ಯಾವುದೇ ಕ್ರಿಕೆಟರ್‌ ನಾಲ್ಕು ಡಿಮೆರಿಟ್‌ ಪಾಯಿಂಟ್‌ಗಳಿಗೆ ಒಳಗಾದರೆ ಒಂದು ಪಂದ್ಯ ನಿಷೇಧಕ್ಕೆ ಒಳಗಾಗಬೇಕಾಗುತ್ತದೆ.

ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4ನೇ ಟೆಸ್ಟ್‌ ಪಂದ್ಯದ ವೇಳೆ, ಓವರ್ ಆದ ನಂತರ ಏಕಾಏಕಿ ಕಾನ್‌ಸ್ಟಸ್‌ ಬಳಿ ತೆರಳಿದ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದರು. ಈ ವೇಳೆ ಇಬ್ಬರ ನಡುವೆ ಸ್ವಲ್ಪ ಸಮಯ ವಾಗ್ವಾದ ನಡೆಯಿತು.

ಈ ಘಟನೆ ಬಗ್ಗೆ 19 ವರ್ಷದ ಕಾನ್‌ಸ್ಟಸ್‌, ಆಟದ ಸಂದರ್ಭದಲ್ಲಿ ಹೀಗಾಗುವುದು ಸಹಜ. ಕೊಹ್ಲಿ ಆಕಸ್ಮಿಕವಾಗಿ ನನಗೆ ಡಿಕ್ಕಿ ಹೊಡೆದಿರಬಹುದು. ಕ್ರಿಕೆಟ್‌ ಆಟದಲ್ಲಿ ಒತ್ತಡ ಇರುವುದರಿಂದ ಇದು ಸಾಮಾನ್ಯ ಎಂದು ಹೇಳಿದ್ದರು.

ಈ ಘಟನೆ ಕುರಿತಂತೆ ಕ್ರಿಕೆಟ್‌ನ ಹಲವು ಮಾಜಿ ಆಟಗಾರರು ಟೀಕೆ ಮಾಡಿದ್ದರು. ಯುವ ಆಟಗಾರನ ಜೊತೆ ಕೊಹ್ಲಿಯ ಈ ವರ್ತನೆ ಸರಿಯಿಲ್ಲ. ಕೊಹ್ಲಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌, ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ವಾನ್‌ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿಗೆ ಪಂದ್ಯ ಶುಲ್ಕದ ಶೇಕಡಾ.20ರಷ್ಟು ದಂಡ ವಿಧಿಸಲಾಗಿದೆ

 

ಆಂದೋಲನ ಡೆಸ್ಕ್

Recent Posts

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

11 mins ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

35 mins ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

41 mins ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

1 hour ago

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

2 hours ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

2 hours ago