ಕ್ರೀಡೆ

ಆಸೀಸ್‌ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ಗೆ ಡಿಕ್ಕಿ ಹೊಡೆದ ವಿರಾಟ್‌ ಕೊಹ್ಲಿಗೆ ದಂಡ

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ.

ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಯುವ ಆಟಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ಒಂದು ಡಿಮೆರಿಟ್‌ ಪಾಯಿಂಟ್‌ ನೀಡಲಾಗಿದೆ.

ಐಸಿಸಿ ನಿಯಮದ ಪ್ರಕಾರ ಯಾವುದೇ ಕ್ರಿಕೆಟರ್‌ ನಾಲ್ಕು ಡಿಮೆರಿಟ್‌ ಪಾಯಿಂಟ್‌ಗಳಿಗೆ ಒಳಗಾದರೆ ಒಂದು ಪಂದ್ಯ ನಿಷೇಧಕ್ಕೆ ಒಳಗಾಗಬೇಕಾಗುತ್ತದೆ.

ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4ನೇ ಟೆಸ್ಟ್‌ ಪಂದ್ಯದ ವೇಳೆ, ಓವರ್ ಆದ ನಂತರ ಏಕಾಏಕಿ ಕಾನ್‌ಸ್ಟಸ್‌ ಬಳಿ ತೆರಳಿದ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದರು. ಈ ವೇಳೆ ಇಬ್ಬರ ನಡುವೆ ಸ್ವಲ್ಪ ಸಮಯ ವಾಗ್ವಾದ ನಡೆಯಿತು.

ಈ ಘಟನೆ ಬಗ್ಗೆ 19 ವರ್ಷದ ಕಾನ್‌ಸ್ಟಸ್‌, ಆಟದ ಸಂದರ್ಭದಲ್ಲಿ ಹೀಗಾಗುವುದು ಸಹಜ. ಕೊಹ್ಲಿ ಆಕಸ್ಮಿಕವಾಗಿ ನನಗೆ ಡಿಕ್ಕಿ ಹೊಡೆದಿರಬಹುದು. ಕ್ರಿಕೆಟ್‌ ಆಟದಲ್ಲಿ ಒತ್ತಡ ಇರುವುದರಿಂದ ಇದು ಸಾಮಾನ್ಯ ಎಂದು ಹೇಳಿದ್ದರು.

ಈ ಘಟನೆ ಕುರಿತಂತೆ ಕ್ರಿಕೆಟ್‌ನ ಹಲವು ಮಾಜಿ ಆಟಗಾರರು ಟೀಕೆ ಮಾಡಿದ್ದರು. ಯುವ ಆಟಗಾರನ ಜೊತೆ ಕೊಹ್ಲಿಯ ಈ ವರ್ತನೆ ಸರಿಯಿಲ್ಲ. ಕೊಹ್ಲಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌, ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ವಾನ್‌ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿಗೆ ಪಂದ್ಯ ಶುಲ್ಕದ ಶೇಕಡಾ.20ರಷ್ಟು ದಂಡ ವಿಧಿಸಲಾಗಿದೆ

 

ಆಂದೋಲನ ಡೆಸ್ಕ್

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

4 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

5 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

7 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

7 hours ago