ಮೆಲ್ಬೊರ್ನ್: ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್ ಕಾನ್ಸ್ಟಸ್ ಅವರಿಗೆ ಭಾರತದ ಕ್ರಿಕೆಟರ್ ವಿರಾಟ್ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ.
ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಯುವ ಆಟಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
ಐಸಿಸಿ ನಿಯಮದ ಪ್ರಕಾರ ಯಾವುದೇ ಕ್ರಿಕೆಟರ್ ನಾಲ್ಕು ಡಿಮೆರಿಟ್ ಪಾಯಿಂಟ್ಗಳಿಗೆ ಒಳಗಾದರೆ ಒಂದು ಪಂದ್ಯ ನಿಷೇಧಕ್ಕೆ ಒಳಗಾಗಬೇಕಾಗುತ್ತದೆ.
ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4ನೇ ಟೆಸ್ಟ್ ಪಂದ್ಯದ ವೇಳೆ, ಓವರ್ ಆದ ನಂತರ ಏಕಾಏಕಿ ಕಾನ್ಸ್ಟಸ್ ಬಳಿ ತೆರಳಿದ ವಿರಾಟ್ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದರು. ಈ ವೇಳೆ ಇಬ್ಬರ ನಡುವೆ ಸ್ವಲ್ಪ ಸಮಯ ವಾಗ್ವಾದ ನಡೆಯಿತು.
ಈ ಘಟನೆ ಬಗ್ಗೆ 19 ವರ್ಷದ ಕಾನ್ಸ್ಟಸ್, ಆಟದ ಸಂದರ್ಭದಲ್ಲಿ ಹೀಗಾಗುವುದು ಸಹಜ. ಕೊಹ್ಲಿ ಆಕಸ್ಮಿಕವಾಗಿ ನನಗೆ ಡಿಕ್ಕಿ ಹೊಡೆದಿರಬಹುದು. ಕ್ರಿಕೆಟ್ ಆಟದಲ್ಲಿ ಒತ್ತಡ ಇರುವುದರಿಂದ ಇದು ಸಾಮಾನ್ಯ ಎಂದು ಹೇಳಿದ್ದರು.
ಈ ಘಟನೆ ಕುರಿತಂತೆ ಕ್ರಿಕೆಟ್ನ ಹಲವು ಮಾಜಿ ಆಟಗಾರರು ಟೀಕೆ ಮಾಡಿದ್ದರು. ಯುವ ಆಟಗಾರನ ಜೊತೆ ಕೊಹ್ಲಿಯ ಈ ವರ್ತನೆ ಸರಿಯಿಲ್ಲ. ಕೊಹ್ಲಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್ನ ಮಾಜಿ ಆಟಗಾರ ಮೈಕಲ್ ವಾನ್ ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇಕಡಾ.20ರಷ್ಟು ದಂಡ ವಿಧಿಸಲಾಗಿದೆ
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…