ಕ್ರೀಡೆ

ಆಸೀಸ್‌ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ಗೆ ಡಿಕ್ಕಿ ಹೊಡೆದ ವಿರಾಟ್‌ ಕೊಹ್ಲಿಗೆ ದಂಡ

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ.

ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಯುವ ಆಟಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ಒಂದು ಡಿಮೆರಿಟ್‌ ಪಾಯಿಂಟ್‌ ನೀಡಲಾಗಿದೆ.

ಐಸಿಸಿ ನಿಯಮದ ಪ್ರಕಾರ ಯಾವುದೇ ಕ್ರಿಕೆಟರ್‌ ನಾಲ್ಕು ಡಿಮೆರಿಟ್‌ ಪಾಯಿಂಟ್‌ಗಳಿಗೆ ಒಳಗಾದರೆ ಒಂದು ಪಂದ್ಯ ನಿಷೇಧಕ್ಕೆ ಒಳಗಾಗಬೇಕಾಗುತ್ತದೆ.

ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4ನೇ ಟೆಸ್ಟ್‌ ಪಂದ್ಯದ ವೇಳೆ, ಓವರ್ ಆದ ನಂತರ ಏಕಾಏಕಿ ಕಾನ್‌ಸ್ಟಸ್‌ ಬಳಿ ತೆರಳಿದ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದರು. ಈ ವೇಳೆ ಇಬ್ಬರ ನಡುವೆ ಸ್ವಲ್ಪ ಸಮಯ ವಾಗ್ವಾದ ನಡೆಯಿತು.

ಈ ಘಟನೆ ಬಗ್ಗೆ 19 ವರ್ಷದ ಕಾನ್‌ಸ್ಟಸ್‌, ಆಟದ ಸಂದರ್ಭದಲ್ಲಿ ಹೀಗಾಗುವುದು ಸಹಜ. ಕೊಹ್ಲಿ ಆಕಸ್ಮಿಕವಾಗಿ ನನಗೆ ಡಿಕ್ಕಿ ಹೊಡೆದಿರಬಹುದು. ಕ್ರಿಕೆಟ್‌ ಆಟದಲ್ಲಿ ಒತ್ತಡ ಇರುವುದರಿಂದ ಇದು ಸಾಮಾನ್ಯ ಎಂದು ಹೇಳಿದ್ದರು.

ಈ ಘಟನೆ ಕುರಿತಂತೆ ಕ್ರಿಕೆಟ್‌ನ ಹಲವು ಮಾಜಿ ಆಟಗಾರರು ಟೀಕೆ ಮಾಡಿದ್ದರು. ಯುವ ಆಟಗಾರನ ಜೊತೆ ಕೊಹ್ಲಿಯ ಈ ವರ್ತನೆ ಸರಿಯಿಲ್ಲ. ಕೊಹ್ಲಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌, ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ವಾನ್‌ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿಗೆ ಪಂದ್ಯ ಶುಲ್ಕದ ಶೇಕಡಾ.20ರಷ್ಟು ದಂಡ ವಿಧಿಸಲಾಗಿದೆ

 

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

11 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

11 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

12 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

12 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

12 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago