ಬಾರ್ಬಡೋಸ್ : ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ.
ಈ ನಡುವೆ ಎರಡನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಅಭ್ಯಾಸ ನಡೆಸುತ್ತಿದ್ದಾಗ ಮೈದಾನದಲ್ಲಿ ಅಭಿಮಾನಿಗಳು ಹಾಜರಿದ್ದು ಆಟಗಾರರನ್ನು ಭೇಟಿಯಾಗಲು ಬಯಸಿದ್ದರು. ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.
ವಿರಾಟ್ಗೆ ವಿಶೇಷ ಉಡುಗೊರೆ
ಟೀಂ ಇಂಡಿಯಾ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಸ್ಟ್ಯಾಂಡ್ನಿಂದ ಹುಡುಗಿಯೊಬ್ಬಳು ಕೊಹ್ಲಿ-ಕೊಹ್ಲಿ ಎಂದು ಮತ್ತೆ ಮತ್ತೆ ಕರೆಯುತ್ತಿರುವುದು ಕೇಳಿಸಿತು. ಕೊಹ್ಲಿಯನ್ನು ಭೇಟಿಯಾಗಲು ಬಯಸಿದ್ದ ಪೋರಿ, ಅವರಿಗಾಗಿ ವಿಶೇಷ ಉಡುಗೊರೆಯೊಂದನ್ನು ತಂದಿದ್ದಳು. ಈ ಹುಡುಗಿಯ ಧ್ವನಿಯನ್ನು ಕೇಳಿದ ನಂತರ ಆಕೆಯನ್ನು ಭೇಟಿಯಾಗಲು ಕೊಹ್ಲಿ ಬಂದರು. ಈ ವೇಳೆ ಆ ಹುಡುಗಿ ಕೊಹ್ಲಿ ಕೈಗೆ ಧರಿಸುವ ಬ್ರೇಸ್ಲೆಟ್ ಒಂದನ್ನು ತಂದಿದ್ದಳು. ಅದನ್ನು ನಯವಾಗಿ ಸ್ವೀಕರಿಸಿದ ಕೊಹ್ಲಿ, ತನ್ನ ಕೈಗೆ ಧರಿಸಿಕೊಂಡರು. ಆ ಬಳಿಕ ಆ ಬಾಲಕಿಯ ಕುಟುಂಬದೊಂದಿಗೆ ಕೊಹ್ಲಿ ಸೆಲ್ಫಿ ಕೂಡ ತೆಗೆದುಕೊಂಡರು.
ಇನ್ನು ಕೆಲವು ಅಭಿಮಾನಿಗಳೊಂದಿಗೆ ಕೊಹ್ಲಿ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಕೂಡ ಅಭಿಮಾನಿಗಳನ್ನು ಭೇಟಿಯಾಗಿ ಆಟೋಗ್ರಾಫ್ ನೀಡಿದರು. ಹಾಗೆಯೇ ತಂಡದ ನಾಯಕ ರೋಹಿತ್ ಕೂಡ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.
ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದರಿಂದ ತಂಡವು ಇದರ ಭಾರವನ್ನು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 181 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…