ಕ್ರೀಡೆ

ಅಭಿಮಾನಿಯ ಉಡುಗೊರೆಗೆ ಮನಸೋತ ಕೊಹ್ಲಿ: ವಿಡಿಯೋ ನೋಡಿ

ಬಾರ್ಬಡೋಸ್‌ : ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ.

ಈ ನಡುವೆ ಎರಡನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಅಭ್ಯಾಸ ನಡೆಸುತ್ತಿದ್ದಾಗ ಮೈದಾನದಲ್ಲಿ ಅಭಿಮಾನಿಗಳು ಹಾಜರಿದ್ದು ಆಟಗಾರರನ್ನು ಭೇಟಿಯಾಗಲು ಬಯಸಿದ್ದರು. ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

ವಿರಾಟ್‌ಗೆ ವಿಶೇಷ ಉಡುಗೊರೆ

ಟೀಂ ಇಂಡಿಯಾ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಸ್ಟ್ಯಾಂಡ್‌ನಿಂದ ಹುಡುಗಿಯೊಬ್ಬಳು ಕೊಹ್ಲಿ-ಕೊಹ್ಲಿ ಎಂದು ಮತ್ತೆ ಮತ್ತೆ ಕರೆಯುತ್ತಿರುವುದು ಕೇಳಿಸಿತು. ಕೊಹ್ಲಿಯನ್ನು ಭೇಟಿಯಾಗಲು ಬಯಸಿದ್ದ ಪೋರಿ, ಅವರಿಗಾಗಿ ವಿಶೇಷ ಉಡುಗೊರೆಯೊಂದನ್ನು ತಂದಿದ್ದಳು. ಈ ಹುಡುಗಿಯ ಧ್ವನಿಯನ್ನು ಕೇಳಿದ ನಂತರ ಆಕೆಯನ್ನು ಭೇಟಿಯಾಗಲು ಕೊಹ್ಲಿ ಬಂದರು. ಈ ವೇಳೆ ಆ ಹುಡುಗಿ ಕೊಹ್ಲಿ ಕೈಗೆ ಧರಿಸುವ ಬ್ರೇಸ್​ಲೆಟ್ ಒಂದನ್ನು ತಂದಿದ್ದಳು. ಅದನ್ನು ನಯವಾಗಿ ಸ್ವೀಕರಿಸಿದ ಕೊಹ್ಲಿ, ತನ್ನ ಕೈಗೆ ಧರಿಸಿಕೊಂಡರು. ಆ ಬಳಿಕ ಆ ಬಾಲಕಿಯ ಕುಟುಂಬದೊಂದಿಗೆ ಕೊಹ್ಲಿ ಸೆಲ್ಫಿ ಕೂಡ ತೆಗೆದುಕೊಂಡರು.

ಇನ್ನು ಕೆಲವು ಅಭಿಮಾನಿಗಳೊಂದಿಗೆ ಕೊಹ್ಲಿ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಕೂಡ ಅಭಿಮಾನಿಗಳನ್ನು ಭೇಟಿಯಾಗಿ ಆಟೋಗ್ರಾಫ್ ನೀಡಿದರು. ಹಾಗೆಯೇ ತಂಡದ ನಾಯಕ ರೋಹಿತ್ ಕೂಡ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.

ಎರಡನೇ ಏಕದಿನ ಪಂದ್ಯದಲ್ಲಿ ವಿಶ್ರಾಂತಿ

ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದರಿಂದ ತಂಡವು ಇದರ ಭಾರವನ್ನು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 181 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

13 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

14 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

14 hours ago