ಕ್ರೀಡೆ

ಅಭಿಮಾನಿಯ ಉಡುಗೊರೆಗೆ ಮನಸೋತ ಕೊಹ್ಲಿ: ವಿಡಿಯೋ ನೋಡಿ

ಬಾರ್ಬಡೋಸ್‌ : ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ.

ಈ ನಡುವೆ ಎರಡನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಅಭ್ಯಾಸ ನಡೆಸುತ್ತಿದ್ದಾಗ ಮೈದಾನದಲ್ಲಿ ಅಭಿಮಾನಿಗಳು ಹಾಜರಿದ್ದು ಆಟಗಾರರನ್ನು ಭೇಟಿಯಾಗಲು ಬಯಸಿದ್ದರು. ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

ವಿರಾಟ್‌ಗೆ ವಿಶೇಷ ಉಡುಗೊರೆ

ಟೀಂ ಇಂಡಿಯಾ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಸ್ಟ್ಯಾಂಡ್‌ನಿಂದ ಹುಡುಗಿಯೊಬ್ಬಳು ಕೊಹ್ಲಿ-ಕೊಹ್ಲಿ ಎಂದು ಮತ್ತೆ ಮತ್ತೆ ಕರೆಯುತ್ತಿರುವುದು ಕೇಳಿಸಿತು. ಕೊಹ್ಲಿಯನ್ನು ಭೇಟಿಯಾಗಲು ಬಯಸಿದ್ದ ಪೋರಿ, ಅವರಿಗಾಗಿ ವಿಶೇಷ ಉಡುಗೊರೆಯೊಂದನ್ನು ತಂದಿದ್ದಳು. ಈ ಹುಡುಗಿಯ ಧ್ವನಿಯನ್ನು ಕೇಳಿದ ನಂತರ ಆಕೆಯನ್ನು ಭೇಟಿಯಾಗಲು ಕೊಹ್ಲಿ ಬಂದರು. ಈ ವೇಳೆ ಆ ಹುಡುಗಿ ಕೊಹ್ಲಿ ಕೈಗೆ ಧರಿಸುವ ಬ್ರೇಸ್​ಲೆಟ್ ಒಂದನ್ನು ತಂದಿದ್ದಳು. ಅದನ್ನು ನಯವಾಗಿ ಸ್ವೀಕರಿಸಿದ ಕೊಹ್ಲಿ, ತನ್ನ ಕೈಗೆ ಧರಿಸಿಕೊಂಡರು. ಆ ಬಳಿಕ ಆ ಬಾಲಕಿಯ ಕುಟುಂಬದೊಂದಿಗೆ ಕೊಹ್ಲಿ ಸೆಲ್ಫಿ ಕೂಡ ತೆಗೆದುಕೊಂಡರು.

ಇನ್ನು ಕೆಲವು ಅಭಿಮಾನಿಗಳೊಂದಿಗೆ ಕೊಹ್ಲಿ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಕೂಡ ಅಭಿಮಾನಿಗಳನ್ನು ಭೇಟಿಯಾಗಿ ಆಟೋಗ್ರಾಫ್ ನೀಡಿದರು. ಹಾಗೆಯೇ ತಂಡದ ನಾಯಕ ರೋಹಿತ್ ಕೂಡ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.

ಎರಡನೇ ಏಕದಿನ ಪಂದ್ಯದಲ್ಲಿ ವಿಶ್ರಾಂತಿ

ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದರಿಂದ ತಂಡವು ಇದರ ಭಾರವನ್ನು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 181 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago