ಕ್ರೀಡೆ

ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದ್ರಾ ಕೊಹ್ಲಿ?

ಮೈಸೂರು :  ಡಿಸೆಂಬರ್‌ 10 ರಿಂದ ಆರಂಭವಾಗುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎಕದಿನ, ಟಿ20 ಮತ್ತು ಟೆಸ್ಟ್‌ ಸೀರಿಸ್‌ ಆಡಲು ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ನಡುವೆಯೇ ವಿರಾಟ್‌ ಕೊಹ್ಲಿ ಅಚ್ಚರಿಯ ನಡೆ ಸದ್ಯ ಭಾರೀ ಸದ್ದು ಮಾಡುತ್ತಿದೆ

ವಿಶ್ವಕಪ್‌ ಸೋತಾಗಿನಿಂದ ಭಾರತ ತಂಡದ ನಾಯಕ ರೊಹಿತ್‌ ಶರ್ಮಾ ಹಾಗೂ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರ ಭವಿಷ್ಯದ ಬಗ್ಗೆ ಊಹಾಪೋಹಗಳು ಹೆಚ್ಚಾಗಿವೆ. ಇದರ ಮಧ್ಯೆ ದಕ್ಷಿಣ ಆಫ್ರಿಕಾ ನಡುವಿನ ಸಿರೀಸ್‌ ಮೇಲೆ ನಿರಾಸಕ್ತಿ ತೋರಿರುವ ವಿರಾಟ್‌ ಕೊಹ್ಲಿ ನಡೆ ಬಗ್ಗೆ ಹಲವಾರು ಪ್ರಶ್ನೆಗಳು ಭುಗಿಲೆದ್ದಿವೆ. ಈ ಕುರಿತು ವಿರಾಟ್‌ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅಂದಹಾಗೆ ವಿರಾಟ್‌ ಕೊಹ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಯಿಂದ ಹಿಂದೆ ಸರಿದಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ರಜೆಗಾಗಿ ಲಂಡನ್‌ಗೆ ತೆರಳಿದ್ದಾರೆ.

ವಿರಾಟ್‌ ಕೊಹ್ಲಿ ದ.ಆಫ್ರಿಕಾ ನಡುವೆ ನಡೆಯುವ ವೈಟ್‌ ಬಾಲ್‌ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳುವುದಾಗಿ ಖುದ್ದು ತಂಡದ ಆಯ್ಕೆಗಾರರು ಮತ್ತು ಬಿಸಿಸಿಐನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಸದ್ಯ ವೈಟ್‌ ಬಾಲ್‌ನಿಂದ ವಿರಾಮ ಪಡೆದು ಡಿಸೆಂಬರ್‌ 26 ರಿಂದ ಆರಂಭವಾಗಲಿರುವ ಟೆಸ್ಟ್‌ ನಲ್ಲಿ ಪಾಲ್ಗೊಳ್ಳುವುದಾಗಿ ವಿರಾಟ್‌ ಹೇಳಿದ್ದಾರೆ ಎನ್ನಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

2024ರಲ್ಲಿ ವೆಸ್ಟ್‌ ಇಂಡೀಸ್‌ ಮತ್ತು ಅಮೇರಿಕಾ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವಿರಾಟ್‌ ಲಬ್ಯತೆ ಕುರಿತು ಈಗಾಗಲೇ ಹಲವಾರು ಪ್ರಶ್ನೆಗಳು ಉದ್ಭವಿಸಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ದ.ಆಫ್ರಿಕಾ ವಿರುದ್ಧ ವಿರಾಟ್‌ ಟಿ20 ಯಲ್ಲಿ ಕಾಣಿಸಿಕೊಳ್ಳದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಭಾರತ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ ನಲ್ಲಿ ಸೋತು ರನ್ನರ್‌ ಅಪ್‌ ಆಗಿತ್ತು. ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಕೋಹ್ಲಿ 3 ಶತಕ ಸಹಿತ ಸಾರ್ವಕಾಲಿಕ 791 ರನ್‌ ಬಾರಿಸಿ ಸರಣಿ ಪುರುಷೋತ್ತಮ ಪ್ರಶಸ್ತಿಗೂ ಭಾಜನರಾಗಿದ್ದರು.

ಭಾರತ ತಂಡ ಟೂರ್ನಿಯಲ್ಲಿ ತಾನಾಡಿದ 10 ಪಂದ್ಯಗಳನ್ನು ಗೆದ್ದು, ಫೈನಲ್‌ನಲ್ಲಿ ಮುಗ್ಗರಿಸಿತ್ತು. ಇದಾದ ಬಳಿಕ ಭಾರತ ತಂಡದಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರ ಸ್ಥಾನದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇತ್ತು. ಇದೀಗ ಕೊಹ್ಲಿ ನಿರ್ಧಾರದಿಂದ ಅಭಿಮಾನಿಗಳಲ್ಲಿ ಹಲವಾರು ಅನುಮಾನಗಳು ಹುಟ್ಟಿಕೊಂಡಿದ್ದು, 2024 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

38 mins ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

53 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

3 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

13 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

14 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

14 hours ago