ಕ್ರೀಡೆ

ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದ್ರಾ ಕೊಹ್ಲಿ?

ಮೈಸೂರು :  ಡಿಸೆಂಬರ್‌ 10 ರಿಂದ ಆರಂಭವಾಗುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎಕದಿನ, ಟಿ20 ಮತ್ತು ಟೆಸ್ಟ್‌ ಸೀರಿಸ್‌ ಆಡಲು ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ನಡುವೆಯೇ ವಿರಾಟ್‌ ಕೊಹ್ಲಿ ಅಚ್ಚರಿಯ ನಡೆ ಸದ್ಯ ಭಾರೀ ಸದ್ದು ಮಾಡುತ್ತಿದೆ

ವಿಶ್ವಕಪ್‌ ಸೋತಾಗಿನಿಂದ ಭಾರತ ತಂಡದ ನಾಯಕ ರೊಹಿತ್‌ ಶರ್ಮಾ ಹಾಗೂ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರ ಭವಿಷ್ಯದ ಬಗ್ಗೆ ಊಹಾಪೋಹಗಳು ಹೆಚ್ಚಾಗಿವೆ. ಇದರ ಮಧ್ಯೆ ದಕ್ಷಿಣ ಆಫ್ರಿಕಾ ನಡುವಿನ ಸಿರೀಸ್‌ ಮೇಲೆ ನಿರಾಸಕ್ತಿ ತೋರಿರುವ ವಿರಾಟ್‌ ಕೊಹ್ಲಿ ನಡೆ ಬಗ್ಗೆ ಹಲವಾರು ಪ್ರಶ್ನೆಗಳು ಭುಗಿಲೆದ್ದಿವೆ. ಈ ಕುರಿತು ವಿರಾಟ್‌ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅಂದಹಾಗೆ ವಿರಾಟ್‌ ಕೊಹ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಯಿಂದ ಹಿಂದೆ ಸರಿದಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ರಜೆಗಾಗಿ ಲಂಡನ್‌ಗೆ ತೆರಳಿದ್ದಾರೆ.

ವಿರಾಟ್‌ ಕೊಹ್ಲಿ ದ.ಆಫ್ರಿಕಾ ನಡುವೆ ನಡೆಯುವ ವೈಟ್‌ ಬಾಲ್‌ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳುವುದಾಗಿ ಖುದ್ದು ತಂಡದ ಆಯ್ಕೆಗಾರರು ಮತ್ತು ಬಿಸಿಸಿಐನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಸದ್ಯ ವೈಟ್‌ ಬಾಲ್‌ನಿಂದ ವಿರಾಮ ಪಡೆದು ಡಿಸೆಂಬರ್‌ 26 ರಿಂದ ಆರಂಭವಾಗಲಿರುವ ಟೆಸ್ಟ್‌ ನಲ್ಲಿ ಪಾಲ್ಗೊಳ್ಳುವುದಾಗಿ ವಿರಾಟ್‌ ಹೇಳಿದ್ದಾರೆ ಎನ್ನಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

2024ರಲ್ಲಿ ವೆಸ್ಟ್‌ ಇಂಡೀಸ್‌ ಮತ್ತು ಅಮೇರಿಕಾ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವಿರಾಟ್‌ ಲಬ್ಯತೆ ಕುರಿತು ಈಗಾಗಲೇ ಹಲವಾರು ಪ್ರಶ್ನೆಗಳು ಉದ್ಭವಿಸಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ದ.ಆಫ್ರಿಕಾ ವಿರುದ್ಧ ವಿರಾಟ್‌ ಟಿ20 ಯಲ್ಲಿ ಕಾಣಿಸಿಕೊಳ್ಳದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಭಾರತ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ ನಲ್ಲಿ ಸೋತು ರನ್ನರ್‌ ಅಪ್‌ ಆಗಿತ್ತು. ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಕೋಹ್ಲಿ 3 ಶತಕ ಸಹಿತ ಸಾರ್ವಕಾಲಿಕ 791 ರನ್‌ ಬಾರಿಸಿ ಸರಣಿ ಪುರುಷೋತ್ತಮ ಪ್ರಶಸ್ತಿಗೂ ಭಾಜನರಾಗಿದ್ದರು.

ಭಾರತ ತಂಡ ಟೂರ್ನಿಯಲ್ಲಿ ತಾನಾಡಿದ 10 ಪಂದ್ಯಗಳನ್ನು ಗೆದ್ದು, ಫೈನಲ್‌ನಲ್ಲಿ ಮುಗ್ಗರಿಸಿತ್ತು. ಇದಾದ ಬಳಿಕ ಭಾರತ ತಂಡದಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಅವರ ಸ್ಥಾನದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇತ್ತು. ಇದೀಗ ಕೊಹ್ಲಿ ನಿರ್ಧಾರದಿಂದ ಅಭಿಮಾನಿಗಳಲ್ಲಿ ಹಲವಾರು ಅನುಮಾನಗಳು ಹುಟ್ಟಿಕೊಂಡಿದ್ದು, 2024 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago