ಕ್ರೀಡೆ

ಬಾಬರ್‌ ಅಝಮ್‌ ಗೆ ಜರ್ಸಿ ನೀಡಿ ಮತ್ತೆ ಮನಗೆದ್ದ ಕೊಹ್ಲಿ: ವಿಡಿಯೋ ನೋಡಿ

ಅಹ್ಮದಾಬಾದ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟಿದ್ದರೂ, ಕ್ರೀಡಾ ಜಗತ್ತು ಆ ಸಂಬಂಧವನ್ನು ಮೀರಿ ಬೆಳೆದು ನಿಂತಿದೆ. ಇಂಥ ಒಂದು ಹೃದಯಸ್ಪರ್ಶಿ ಕ್ಷಣಕ್ಕೆ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ವಿಶ್ವಕಪ್ 2023 ಪಂದ್ಯ ಸಾಕ್ಷಿಯಾಯಿತು.

ಪಾಕಿಸ್ತಾನವು 7 ವಿಕೆಟ್‌ಗಳಿಂದ ಪಂದ್ಯವನ್ನು ಸೋತಿತ್ತು. ಪಂದ್ಯದ ಬಳಿಕ ವಿರಾಟ್‌ ಕೊಹ್ಲಿ – ಬಾಬರ್ ಅಝಮ್‌ ಪರಸ್ಪರ ಮಾತುಕತೆಯಲ್ಲಿ ತೊಡಗಿದ್ದರು. ಈ ಸಂದರ್ಭ ಕೊಹ್ಲಿ, ಬಾಬರ್‌ ಗೆ ಸಹಿ ಮಾಡಿದ ಜೆರ್ಸಿಯನ್ನು ನೀಡಿದಾಗ, ಪಾಕಿಸ್ತಾನ ತಂಡದ ನಾಯಕ ಬಾಬರ್‌ ಅಝಮ್ ಮುಖದಲ್ಲಿ ಪಂದ್ಯ ಗೆದ್ದಷ್ಟೇ ಖುಷಿ ಕಂಡು ಬಂತು.

ಈ ಕ್ರೀಡಾ ಸೌಹಾರ್ದತೆಯ ಕ್ಷಣವನ್ನು ʼxʼ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ವೈರಲ್‌ ಆಗಿದೆ. ಕ್ರೀಡಾಂಗಣ, ಗಡಿ ಮೀರಿದ ಕೊಹ್ಲಿಯ ಕ್ರೀಡಾ ವೈಶಾಲ್ಯತೆ ಕ್ರೀಡಾ ಪ್ರೇಮಿಗಳ ಮನ ಗೆದ್ದಿದೆ.

https://x.com/RVCJ_FB/status/1713217806467264713?s=20

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

4 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

5 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

5 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

6 hours ago