ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್ಗಳಿಂದ ಸೋಲಿಸಿದ ನ್ಯೂಜಿಲೆಂಡ್ 1-2 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಭಾರತದ ಗೆಲುವಿಗೆ 338 ರನ್ಗಳ ಬೃಹತ್ ಟಾರ್ಗೆಟ್ ನೀಡಿತ್ತು.
ಈ ಬೃಹತ್ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರೋಹಿತ್ ಶರ್ಮಾ (11 ರನ್), ಶುಭಮನ್ ಗಿಲ್ (23 ರನ್) ವಿಕೆಟ್ ಒಪ್ಪಿಸಿ ಹೊರನಡೆದರು. ನಂತರ ಬಂದ ಶ್ರೇಯಸ್ ಅಯ್ಯರ್ (3 ರನ್), ಕೆ.ಎಲ್. ರಾಹುಲ್ (1 ರನ್) ಗಳಿಸಿ ಪೆವಿಲಿಯನ್ ಸೇರಿಕೊಂಡರು. ಒಂದು ಹಂತದಲ್ಲಿ ಭಾರತ ತಂಡ 200 ತಲುಪುವುದು ಕೂಡ ಅಸಾಧ್ಯ ಎಂಬ ವಾತಾವರಣ ನಿರ್ಮಾಣವಾಯಿತು.
ಬೃಹತ್ ಮೊತ್ತದ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ಬ್ಯಾಟ್ಸ್ಮನ್ಗಳ ವೈಫಲ್ಯದಿಂದಾಗಿ ಸೋಲಿಗೆ ಕೊರಳೊಡ್ಡಿತು. ತಂಡದ ಪರ ವಿರಾಟ್ ಕೊಹ್ಲಿ(124) ಏಕಾಂಗಿ ಹೋರಾಟ ನೀಡಿದರಾದರೂ, ಅವರಿಗೆ ಪ್ರಮುಖ ಬ್ಯಾಟ್ಸ್ಮನ್ಗಳು ಸಾಥ್ ನೀಡಲಿಲ್ಲ. ಹೀಗಾಗಿ ತಂಡಕ್ಕೆ ಸರಣಿ ಸೋಲಿನ ಆಘಾತ ಎದುರಾಯಿತು.
ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಯಾರು ವಿನ್ನರ್ ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.…
ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ…
ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು…
ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು…
ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ…