ಕ್ರೀಡೆ

ಕೊಹ್ಲಿ ಹೋರಾಟ ವ್ಯರ್ಥ : ಏಕದಿನ ಸರಣಿ ಸೋತ ಇಂಡಿಯಾ

ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್‌ 1-2 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಭಾರತದ ಗೆಲುವಿಗೆ 338 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತ್ತು.

ಈ ಬೃಹತ್ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರೋಹಿತ್ ಶರ್ಮಾ (11 ರನ್), ಶುಭಮನ್ ಗಿಲ್ (23 ರನ್) ವಿಕೆಟ್ ಒಪ್ಪಿಸಿ ಹೊರನಡೆದರು. ನಂತರ ಬಂದ ಶ್ರೇಯಸ್ ಅಯ್ಯರ್ (3 ರನ್), ಕೆ.ಎಲ್. ರಾಹುಲ್ (1 ರನ್) ಗಳಿಸಿ ಪೆವಿಲಿಯನ್ ಸೇರಿಕೊಂಡರು. ಒಂದು ಹಂತದಲ್ಲಿ ಭಾರತ ತಂಡ 200 ತಲುಪುವುದು ಕೂಡ ಅಸಾಧ್ಯ ಎಂಬ ವಾತಾವರಣ ನಿರ್ಮಾಣವಾಯಿತು.

ಬೃಹತ್‌ ಮೊತ್ತದ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ಬ್ಯಾಟ್ಸ್‌ಮನ್​ಗಳ ವೈಫಲ್ಯದಿಂದಾಗಿ ಸೋಲಿಗೆ ಕೊರಳೊಡ್ಡಿತು. ತಂಡದ ಪರ ವಿರಾಟ್ ಕೊಹ್ಲಿ(124) ಏಕಾಂಗಿ ಹೋರಾಟ ನೀಡಿದರಾದರೂ, ಅವರಿಗೆ ಪ್ರಮುಖ ಬ್ಯಾಟ್ಸ್‌ಮನ್​ಗಳು ಸಾಥ್ ನೀಡಲಿಲ್ಲ. ಹೀಗಾಗಿ ತಂಡಕ್ಕೆ ಸರಣಿ ಸೋಲಿನ ಆಘಾತ ಎದುರಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

BBK12 | ಬಿಗ್‌ಬಾಸ್‌ ಗೆದ್ದು ಬೀಗಿದ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌

ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಯಾರು ವಿನ್ನರ್‌ ಆಗಲಿದ್ದಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.…

10 mins ago

ಬಹುರೂಪಿಗೆ ವರ್ಣರಂಜಿತ ತೆರೆ

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ…

1 hour ago

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಜಾ.ದಳ ಸಜ್ಜು

ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು…

2 hours ago

ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿ ಹೋರಾಟಕ್ಕೆ ಸಜ್ಜಾಗಿ : ಮೈಸೂರಲ್ಲಿ ಸಿಎಂ ಕರೆ

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು…

3 hours ago

ಮಂಡ್ಯ | ಜಿಲ್ಲೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತರಲು ಪ್ರಯತ್ನ ; ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ…

4 hours ago

ಮೌನಿ ಅಮಾವಾಸ್ಯೆ : ಮ.ಬೆಟ್ಟದಲ್ಲಿ ಜನಸಾಗರ, ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರ ಭೇಟಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ…

4 hours ago