ಕ್ರೀಡೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ರೋಚಕ ಗೆಲುವಿನೊಂದಿಗೆ ಭಾರತೀಯ ಜೋಡಿ ಫೈನಲ್​ಗೆ ಪ್ರವೇಶಿಸಿದರು.

ಜಿನ್ನಮ್ ಕ್ರೀಡಾಂಗಣದಲ್ಲಿ ನಡೆದ 40 ನಿಮಿಷಗಳ ಹಣಾಹಣಿಯಲ್ಲಿ ಭಾರತದ ಜೋಡಿಯು ಎರಡನೇ ಶ್ರೇಯಾಂಕದ ಚೀನಾ ವಿರುದ್ಧ 21-15, 24-22 ಅಂತರದಲ್ಲಿ ಜಯ ಸಾಧಿಸಿದರು. ಇದು ಚೀನಾ ಜೋಡಿಯ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರ ಮೊದಲ ಗೆಲುವು ಎಂಬುದು ವಿಶೇಷ.

ಮೊದಲ ಸೆಟ್​ನಲ್ಲಿ 21 ಪಾಯಿಂಟ್ಸ್​ ಕಲೆಹಾಕಿದ ಸಾತ್ವಿಕ್ ಹಾಗೂ ಚಿರಾಗ್ ಮುನ್ನಡೆ ಕಾಯ್ದುಕೊಂಡಿದ್ದರು. ಅತ್ತ ಲಿಯಾಂಗ್ ಜೋಡಿ 15 ರಲ್ಲೇ ಉಳಿದರು. ಇದರೊಂದಿಗೆ 6 ಅಂಕಗಳ ಅಂತರದೊಂದಿಗೆ ಭಾರತೀಯ ಜೋಡಿ ಮೊದಲ ಸೆಟ್​​ನಲ್ಲಿ ಜಯ ಸಾಧಿಸಿದರು.

ಆದರೆ ಎರಡನೇ ಸೆಟ್​ನಲ್ಲಿ ಚೀನಾ ಜೋಡಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಪರಿಣಾಮ ಒಂದು ಹಂತದಲ್ಲಿ ಪಾಯಿಂಟ್ಸ್​ 19-19 ರಲ್ಲಿ ಸಮಗೊಂಡಿತು. ಈ ಅತ್ಯುತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದ ಸಾತ್ವಿಕ್-ಚಿರಾಗ್ ಸ್ಮ್ಯಾಶ್​ಗಳ ಮೂಲಕ ಪಾಯಿಂಟ್ಸ್ ಕಲೆಹಾಕಿದರು. ಪರಿಣಾಮ 2ನೇ ಸೆಟ್​ನಲ್ಲಿ 24-22 ಅಂತರದಿಂದ ರೋಚಕ ಗೆಲುವು ದಕ್ಕಿಸಿಕೊಂಡರು.

ಈ ಗೆಲುವಿನೊಂದಿಗೆ ಸಾತ್ವಿಕ್ ಹಾಗು ಚಿರಾಗ್ ಶೆಟ್ಟಿ ಕೊರಿಯ ಓಪನ್ ಸೂಪರ್ 500 ನಲ್ಲಿ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಮತ್ತೊಂದು ಪ್ರಶಸ್ತಿ ಗೆಲ್ಲುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ, ಅವರು ಸ್ವಿಸ್ ಓಪನ್‌ನಲ್ಲಿ ಸಾತ್ವಿಕ್-ಚಿರಾಗ್ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು. ಅಲ್ಲದೆ ದುಬೈನಲ್ಲಿ ನಡೆದ 2023 ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಕೂಡ ಗೆದ್ದಿದ್ದರು.

ಇದಾದ ಬಳಿಕ 2023 ರ ಇಂಡೋನೇಷ್ಯಾ ಓಪನ್‌ನ ಫೈನಲ್‌ನಲ್ಲಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಸೋಲಿಸಿ ಮೊದಲ BWF ವರ್ಲ್ಡ್ ಸೂಪರ್ 1000 ಪ್ರಶಸ್ತಿ ಗೆದ್ದ ಭಾರತೀಯ ಜೋಡಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಂದು ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

andolanait

Recent Posts

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

24 mins ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

60 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

2 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

4 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

4 hours ago