ಕ್ರೀಡೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ರೋಚಕ ಗೆಲುವಿನೊಂದಿಗೆ ಭಾರತೀಯ ಜೋಡಿ ಫೈನಲ್​ಗೆ ಪ್ರವೇಶಿಸಿದರು.

ಜಿನ್ನಮ್ ಕ್ರೀಡಾಂಗಣದಲ್ಲಿ ನಡೆದ 40 ನಿಮಿಷಗಳ ಹಣಾಹಣಿಯಲ್ಲಿ ಭಾರತದ ಜೋಡಿಯು ಎರಡನೇ ಶ್ರೇಯಾಂಕದ ಚೀನಾ ವಿರುದ್ಧ 21-15, 24-22 ಅಂತರದಲ್ಲಿ ಜಯ ಸಾಧಿಸಿದರು. ಇದು ಚೀನಾ ಜೋಡಿಯ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರ ಮೊದಲ ಗೆಲುವು ಎಂಬುದು ವಿಶೇಷ.

ಮೊದಲ ಸೆಟ್​ನಲ್ಲಿ 21 ಪಾಯಿಂಟ್ಸ್​ ಕಲೆಹಾಕಿದ ಸಾತ್ವಿಕ್ ಹಾಗೂ ಚಿರಾಗ್ ಮುನ್ನಡೆ ಕಾಯ್ದುಕೊಂಡಿದ್ದರು. ಅತ್ತ ಲಿಯಾಂಗ್ ಜೋಡಿ 15 ರಲ್ಲೇ ಉಳಿದರು. ಇದರೊಂದಿಗೆ 6 ಅಂಕಗಳ ಅಂತರದೊಂದಿಗೆ ಭಾರತೀಯ ಜೋಡಿ ಮೊದಲ ಸೆಟ್​​ನಲ್ಲಿ ಜಯ ಸಾಧಿಸಿದರು.

ಆದರೆ ಎರಡನೇ ಸೆಟ್​ನಲ್ಲಿ ಚೀನಾ ಜೋಡಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಪರಿಣಾಮ ಒಂದು ಹಂತದಲ್ಲಿ ಪಾಯಿಂಟ್ಸ್​ 19-19 ರಲ್ಲಿ ಸಮಗೊಂಡಿತು. ಈ ಅತ್ಯುತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದ ಸಾತ್ವಿಕ್-ಚಿರಾಗ್ ಸ್ಮ್ಯಾಶ್​ಗಳ ಮೂಲಕ ಪಾಯಿಂಟ್ಸ್ ಕಲೆಹಾಕಿದರು. ಪರಿಣಾಮ 2ನೇ ಸೆಟ್​ನಲ್ಲಿ 24-22 ಅಂತರದಿಂದ ರೋಚಕ ಗೆಲುವು ದಕ್ಕಿಸಿಕೊಂಡರು.

ಈ ಗೆಲುವಿನೊಂದಿಗೆ ಸಾತ್ವಿಕ್ ಹಾಗು ಚಿರಾಗ್ ಶೆಟ್ಟಿ ಕೊರಿಯ ಓಪನ್ ಸೂಪರ್ 500 ನಲ್ಲಿ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಮತ್ತೊಂದು ಪ್ರಶಸ್ತಿ ಗೆಲ್ಲುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ, ಅವರು ಸ್ವಿಸ್ ಓಪನ್‌ನಲ್ಲಿ ಸಾತ್ವಿಕ್-ಚಿರಾಗ್ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು. ಅಲ್ಲದೆ ದುಬೈನಲ್ಲಿ ನಡೆದ 2023 ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಕೂಡ ಗೆದ್ದಿದ್ದರು.

ಇದಾದ ಬಳಿಕ 2023 ರ ಇಂಡೋನೇಷ್ಯಾ ಓಪನ್‌ನ ಫೈನಲ್‌ನಲ್ಲಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಸೋಲಿಸಿ ಮೊದಲ BWF ವರ್ಲ್ಡ್ ಸೂಪರ್ 1000 ಪ್ರಶಸ್ತಿ ಗೆದ್ದ ಭಾರತೀಯ ಜೋಡಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಂದು ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

10 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

10 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago