ಕ್ರೀಡೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ರೋಚಕ ಗೆಲುವಿನೊಂದಿಗೆ ಭಾರತೀಯ ಜೋಡಿ ಫೈನಲ್​ಗೆ ಪ್ರವೇಶಿಸಿದರು.

ಜಿನ್ನಮ್ ಕ್ರೀಡಾಂಗಣದಲ್ಲಿ ನಡೆದ 40 ನಿಮಿಷಗಳ ಹಣಾಹಣಿಯಲ್ಲಿ ಭಾರತದ ಜೋಡಿಯು ಎರಡನೇ ಶ್ರೇಯಾಂಕದ ಚೀನಾ ವಿರುದ್ಧ 21-15, 24-22 ಅಂತರದಲ್ಲಿ ಜಯ ಸಾಧಿಸಿದರು. ಇದು ಚೀನಾ ಜೋಡಿಯ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರ ಮೊದಲ ಗೆಲುವು ಎಂಬುದು ವಿಶೇಷ.

ಮೊದಲ ಸೆಟ್​ನಲ್ಲಿ 21 ಪಾಯಿಂಟ್ಸ್​ ಕಲೆಹಾಕಿದ ಸಾತ್ವಿಕ್ ಹಾಗೂ ಚಿರಾಗ್ ಮುನ್ನಡೆ ಕಾಯ್ದುಕೊಂಡಿದ್ದರು. ಅತ್ತ ಲಿಯಾಂಗ್ ಜೋಡಿ 15 ರಲ್ಲೇ ಉಳಿದರು. ಇದರೊಂದಿಗೆ 6 ಅಂಕಗಳ ಅಂತರದೊಂದಿಗೆ ಭಾರತೀಯ ಜೋಡಿ ಮೊದಲ ಸೆಟ್​​ನಲ್ಲಿ ಜಯ ಸಾಧಿಸಿದರು.

ಆದರೆ ಎರಡನೇ ಸೆಟ್​ನಲ್ಲಿ ಚೀನಾ ಜೋಡಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಪರಿಣಾಮ ಒಂದು ಹಂತದಲ್ಲಿ ಪಾಯಿಂಟ್ಸ್​ 19-19 ರಲ್ಲಿ ಸಮಗೊಂಡಿತು. ಈ ಅತ್ಯುತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದ ಸಾತ್ವಿಕ್-ಚಿರಾಗ್ ಸ್ಮ್ಯಾಶ್​ಗಳ ಮೂಲಕ ಪಾಯಿಂಟ್ಸ್ ಕಲೆಹಾಕಿದರು. ಪರಿಣಾಮ 2ನೇ ಸೆಟ್​ನಲ್ಲಿ 24-22 ಅಂತರದಿಂದ ರೋಚಕ ಗೆಲುವು ದಕ್ಕಿಸಿಕೊಂಡರು.

ಈ ಗೆಲುವಿನೊಂದಿಗೆ ಸಾತ್ವಿಕ್ ಹಾಗು ಚಿರಾಗ್ ಶೆಟ್ಟಿ ಕೊರಿಯ ಓಪನ್ ಸೂಪರ್ 500 ನಲ್ಲಿ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಮತ್ತೊಂದು ಪ್ರಶಸ್ತಿ ಗೆಲ್ಲುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ, ಅವರು ಸ್ವಿಸ್ ಓಪನ್‌ನಲ್ಲಿ ಸಾತ್ವಿಕ್-ಚಿರಾಗ್ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು. ಅಲ್ಲದೆ ದುಬೈನಲ್ಲಿ ನಡೆದ 2023 ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಕೂಡ ಗೆದ್ದಿದ್ದರು.

ಇದಾದ ಬಳಿಕ 2023 ರ ಇಂಡೋನೇಷ್ಯಾ ಓಪನ್‌ನ ಫೈನಲ್‌ನಲ್ಲಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಸೋಲಿಸಿ ಮೊದಲ BWF ವರ್ಲ್ಡ್ ಸೂಪರ್ 1000 ಪ್ರಶಸ್ತಿ ಗೆದ್ದ ಭಾರತೀಯ ಜೋಡಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಂದು ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

4 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

4 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

5 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

5 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

5 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

5 hours ago