ಕ್ರೀಡೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ರೋಚಕ ಗೆಲುವಿನೊಂದಿಗೆ ಭಾರತೀಯ ಜೋಡಿ ಫೈನಲ್​ಗೆ ಪ್ರವೇಶಿಸಿದರು.

ಜಿನ್ನಮ್ ಕ್ರೀಡಾಂಗಣದಲ್ಲಿ ನಡೆದ 40 ನಿಮಿಷಗಳ ಹಣಾಹಣಿಯಲ್ಲಿ ಭಾರತದ ಜೋಡಿಯು ಎರಡನೇ ಶ್ರೇಯಾಂಕದ ಚೀನಾ ವಿರುದ್ಧ 21-15, 24-22 ಅಂತರದಲ್ಲಿ ಜಯ ಸಾಧಿಸಿದರು. ಇದು ಚೀನಾ ಜೋಡಿಯ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರ ಮೊದಲ ಗೆಲುವು ಎಂಬುದು ವಿಶೇಷ.

ಮೊದಲ ಸೆಟ್​ನಲ್ಲಿ 21 ಪಾಯಿಂಟ್ಸ್​ ಕಲೆಹಾಕಿದ ಸಾತ್ವಿಕ್ ಹಾಗೂ ಚಿರಾಗ್ ಮುನ್ನಡೆ ಕಾಯ್ದುಕೊಂಡಿದ್ದರು. ಅತ್ತ ಲಿಯಾಂಗ್ ಜೋಡಿ 15 ರಲ್ಲೇ ಉಳಿದರು. ಇದರೊಂದಿಗೆ 6 ಅಂಕಗಳ ಅಂತರದೊಂದಿಗೆ ಭಾರತೀಯ ಜೋಡಿ ಮೊದಲ ಸೆಟ್​​ನಲ್ಲಿ ಜಯ ಸಾಧಿಸಿದರು.

ಆದರೆ ಎರಡನೇ ಸೆಟ್​ನಲ್ಲಿ ಚೀನಾ ಜೋಡಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಪರಿಣಾಮ ಒಂದು ಹಂತದಲ್ಲಿ ಪಾಯಿಂಟ್ಸ್​ 19-19 ರಲ್ಲಿ ಸಮಗೊಂಡಿತು. ಈ ಅತ್ಯುತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದ ಸಾತ್ವಿಕ್-ಚಿರಾಗ್ ಸ್ಮ್ಯಾಶ್​ಗಳ ಮೂಲಕ ಪಾಯಿಂಟ್ಸ್ ಕಲೆಹಾಕಿದರು. ಪರಿಣಾಮ 2ನೇ ಸೆಟ್​ನಲ್ಲಿ 24-22 ಅಂತರದಿಂದ ರೋಚಕ ಗೆಲುವು ದಕ್ಕಿಸಿಕೊಂಡರು.

ಈ ಗೆಲುವಿನೊಂದಿಗೆ ಸಾತ್ವಿಕ್ ಹಾಗು ಚಿರಾಗ್ ಶೆಟ್ಟಿ ಕೊರಿಯ ಓಪನ್ ಸೂಪರ್ 500 ನಲ್ಲಿ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಮತ್ತೊಂದು ಪ್ರಶಸ್ತಿ ಗೆಲ್ಲುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ, ಅವರು ಸ್ವಿಸ್ ಓಪನ್‌ನಲ್ಲಿ ಸಾತ್ವಿಕ್-ಚಿರಾಗ್ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು. ಅಲ್ಲದೆ ದುಬೈನಲ್ಲಿ ನಡೆದ 2023 ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಕೂಡ ಗೆದ್ದಿದ್ದರು.

ಇದಾದ ಬಳಿಕ 2023 ರ ಇಂಡೋನೇಷ್ಯಾ ಓಪನ್‌ನ ಫೈನಲ್‌ನಲ್ಲಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಸೋಲಿಸಿ ಮೊದಲ BWF ವರ್ಲ್ಡ್ ಸೂಪರ್ 1000 ಪ್ರಶಸ್ತಿ ಗೆದ್ದ ಭಾರತೀಯ ಜೋಡಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಂದು ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

13 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

13 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

15 hours ago