ಕ್ರೀಡೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ರೋಚಕ ಗೆಲುವಿನೊಂದಿಗೆ ಭಾರತೀಯ ಜೋಡಿ ಫೈನಲ್​ಗೆ ಪ್ರವೇಶಿಸಿದರು.

ಜಿನ್ನಮ್ ಕ್ರೀಡಾಂಗಣದಲ್ಲಿ ನಡೆದ 40 ನಿಮಿಷಗಳ ಹಣಾಹಣಿಯಲ್ಲಿ ಭಾರತದ ಜೋಡಿಯು ಎರಡನೇ ಶ್ರೇಯಾಂಕದ ಚೀನಾ ವಿರುದ್ಧ 21-15, 24-22 ಅಂತರದಲ್ಲಿ ಜಯ ಸಾಧಿಸಿದರು. ಇದು ಚೀನಾ ಜೋಡಿಯ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರ ಮೊದಲ ಗೆಲುವು ಎಂಬುದು ವಿಶೇಷ.

ಮೊದಲ ಸೆಟ್​ನಲ್ಲಿ 21 ಪಾಯಿಂಟ್ಸ್​ ಕಲೆಹಾಕಿದ ಸಾತ್ವಿಕ್ ಹಾಗೂ ಚಿರಾಗ್ ಮುನ್ನಡೆ ಕಾಯ್ದುಕೊಂಡಿದ್ದರು. ಅತ್ತ ಲಿಯಾಂಗ್ ಜೋಡಿ 15 ರಲ್ಲೇ ಉಳಿದರು. ಇದರೊಂದಿಗೆ 6 ಅಂಕಗಳ ಅಂತರದೊಂದಿಗೆ ಭಾರತೀಯ ಜೋಡಿ ಮೊದಲ ಸೆಟ್​​ನಲ್ಲಿ ಜಯ ಸಾಧಿಸಿದರು.

ಆದರೆ ಎರಡನೇ ಸೆಟ್​ನಲ್ಲಿ ಚೀನಾ ಜೋಡಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಪರಿಣಾಮ ಒಂದು ಹಂತದಲ್ಲಿ ಪಾಯಿಂಟ್ಸ್​ 19-19 ರಲ್ಲಿ ಸಮಗೊಂಡಿತು. ಈ ಅತ್ಯುತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದ ಸಾತ್ವಿಕ್-ಚಿರಾಗ್ ಸ್ಮ್ಯಾಶ್​ಗಳ ಮೂಲಕ ಪಾಯಿಂಟ್ಸ್ ಕಲೆಹಾಕಿದರು. ಪರಿಣಾಮ 2ನೇ ಸೆಟ್​ನಲ್ಲಿ 24-22 ಅಂತರದಿಂದ ರೋಚಕ ಗೆಲುವು ದಕ್ಕಿಸಿಕೊಂಡರು.

ಈ ಗೆಲುವಿನೊಂದಿಗೆ ಸಾತ್ವಿಕ್ ಹಾಗು ಚಿರಾಗ್ ಶೆಟ್ಟಿ ಕೊರಿಯ ಓಪನ್ ಸೂಪರ್ 500 ನಲ್ಲಿ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಮತ್ತೊಂದು ಪ್ರಶಸ್ತಿ ಗೆಲ್ಲುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ, ಅವರು ಸ್ವಿಸ್ ಓಪನ್‌ನಲ್ಲಿ ಸಾತ್ವಿಕ್-ಚಿರಾಗ್ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು. ಅಲ್ಲದೆ ದುಬೈನಲ್ಲಿ ನಡೆದ 2023 ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಕೂಡ ಗೆದ್ದಿದ್ದರು.

ಇದಾದ ಬಳಿಕ 2023 ರ ಇಂಡೋನೇಷ್ಯಾ ಓಪನ್‌ನ ಫೈನಲ್‌ನಲ್ಲಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಸೋಲಿಸಿ ಮೊದಲ BWF ವರ್ಲ್ಡ್ ಸೂಪರ್ 1000 ಪ್ರಶಸ್ತಿ ಗೆದ್ದ ಭಾರತೀಯ ಜೋಡಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಂದು ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

19 mins ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

57 mins ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

1 hour ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

1 hour ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

2 hours ago