ಕ್ರೀಡೆ

ಕೊರಿಯಾ ಓಪನ್ ಬ್ಯಾಡ್ಮಿಂಟನ್​: ಫೈನಲ್​ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ ರೋಚಕ ಗೆಲುವಿನೊಂದಿಗೆ ಭಾರತೀಯ ಜೋಡಿ ಫೈನಲ್​ಗೆ ಪ್ರವೇಶಿಸಿದರು.

ಜಿನ್ನಮ್ ಕ್ರೀಡಾಂಗಣದಲ್ಲಿ ನಡೆದ 40 ನಿಮಿಷಗಳ ಹಣಾಹಣಿಯಲ್ಲಿ ಭಾರತದ ಜೋಡಿಯು ಎರಡನೇ ಶ್ರೇಯಾಂಕದ ಚೀನಾ ವಿರುದ್ಧ 21-15, 24-22 ಅಂತರದಲ್ಲಿ ಜಯ ಸಾಧಿಸಿದರು. ಇದು ಚೀನಾ ಜೋಡಿಯ ವಿರುದ್ಧ ಸಾತ್ವಿಕ್ ಮತ್ತು ಚಿರಾಗ್ ಅವರ ಮೊದಲ ಗೆಲುವು ಎಂಬುದು ವಿಶೇಷ.

ಮೊದಲ ಸೆಟ್​ನಲ್ಲಿ 21 ಪಾಯಿಂಟ್ಸ್​ ಕಲೆಹಾಕಿದ ಸಾತ್ವಿಕ್ ಹಾಗೂ ಚಿರಾಗ್ ಮುನ್ನಡೆ ಕಾಯ್ದುಕೊಂಡಿದ್ದರು. ಅತ್ತ ಲಿಯಾಂಗ್ ಜೋಡಿ 15 ರಲ್ಲೇ ಉಳಿದರು. ಇದರೊಂದಿಗೆ 6 ಅಂಕಗಳ ಅಂತರದೊಂದಿಗೆ ಭಾರತೀಯ ಜೋಡಿ ಮೊದಲ ಸೆಟ್​​ನಲ್ಲಿ ಜಯ ಸಾಧಿಸಿದರು.

ಆದರೆ ಎರಡನೇ ಸೆಟ್​ನಲ್ಲಿ ಚೀನಾ ಜೋಡಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಪರಿಣಾಮ ಒಂದು ಹಂತದಲ್ಲಿ ಪಾಯಿಂಟ್ಸ್​ 19-19 ರಲ್ಲಿ ಸಮಗೊಂಡಿತು. ಈ ಅತ್ಯುತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದ ಸಾತ್ವಿಕ್-ಚಿರಾಗ್ ಸ್ಮ್ಯಾಶ್​ಗಳ ಮೂಲಕ ಪಾಯಿಂಟ್ಸ್ ಕಲೆಹಾಕಿದರು. ಪರಿಣಾಮ 2ನೇ ಸೆಟ್​ನಲ್ಲಿ 24-22 ಅಂತರದಿಂದ ರೋಚಕ ಗೆಲುವು ದಕ್ಕಿಸಿಕೊಂಡರು.

ಈ ಗೆಲುವಿನೊಂದಿಗೆ ಸಾತ್ವಿಕ್ ಹಾಗು ಚಿರಾಗ್ ಶೆಟ್ಟಿ ಕೊರಿಯ ಓಪನ್ ಸೂಪರ್ 500 ನಲ್ಲಿ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಮತ್ತೊಂದು ಪ್ರಶಸ್ತಿ ಗೆಲ್ಲುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ, ಅವರು ಸ್ವಿಸ್ ಓಪನ್‌ನಲ್ಲಿ ಸಾತ್ವಿಕ್-ಚಿರಾಗ್ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು. ಅಲ್ಲದೆ ದುಬೈನಲ್ಲಿ ನಡೆದ 2023 ರ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಕೂಡ ಗೆದ್ದಿದ್ದರು.

ಇದಾದ ಬಳಿಕ 2023 ರ ಇಂಡೋನೇಷ್ಯಾ ಓಪನ್‌ನ ಫೈನಲ್‌ನಲ್ಲಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಸೋಲಿಸಿ ಮೊದಲ BWF ವರ್ಲ್ಡ್ ಸೂಪರ್ 1000 ಪ್ರಶಸ್ತಿ ಗೆದ್ದ ಭಾರತೀಯ ಜೋಡಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿರುವ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತೊಂದು ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

andolanait

Recent Posts

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

20 mins ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

1 hour ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

2 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

2 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

4 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

5 hours ago