ಇಂದೋರ್: ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಟಾಸ್ ಗೆದ್ದ ತಮಿಳುನಾಡು ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಅದರಂತೆ ಇನ್ನಿಂಗ್ಸ್ ಆರಂಭಿಸಿದ ತಮಿಳುನಾಡು ಬ್ಯಾಟರ್ಗಳು ಕರ್ನಾಟಕದ ವೇಗಿಗಳ ಮುಂದೆ ಆರಂಭದಲ್ಲೇ ಮುಗ್ಗರಿಸಿದ್ದಾರೆ.
ಜಗದೀಶನ್(0) ಖಾತೆ ತೆರೆಯುವ ಮುನ್ನವೇ ವಿ.ಕೌಶಿಕ್ ಇವರ ವಿಕೆಟ್ ಪಡೆದು ಆರಂಭದ ಯಶಸ್ಸನ್ನು ತಂದು ಕೊಟ್ಟರು. ನಂತರ ಇಂದ್ರಜಿತ್ (5) ರನ್ ಗಳಿಸಿ ಆಡುವ ವೇಳೆ ವಿದ್ಯಾಧರ್ ಪಟೇಲ್ ಬೌಲಿಂಗ್ನಲ್ಲಿ ಶ್ರೇಯಸ್ ಗೋಪಾಲ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ನಂತರ ಬಂದ ಬ್ಯಾಟರ್ಗಳು ಆರಂಭಿಕ ಆಟಗಾರರನ್ನೇ ಹಿಂಬಾಲಿಸುತ್ತಾ ಪೆವಿಲಿಯನ್ ಹಾದಿ ಹಿಡಿದರು. ಈ ಹಂತದಲ್ಲಿ ನಾಯಕ ಶಾರುಖ್ ಖಾನ್ 19 ರನ್ ಬಾರಿಸಿ ತಂಡಕ್ಕೆ ಆಸರೆಯಾಗುವ ಭರವಸೆ ನೀಡಿದ್ದರು. ಆದರೆ ಮನೋಜ್ ಭಾಂಡಗೆ ಎಸೆತ ಗುರುತಿಸುವಲ್ಲಿ ವಿಫಲರಾದ ಶಾರುಖ್ ವಿಕೆಟ್ ಒಪ್ಪಿಸಿದರು.
ಕರ್ನಾಟಕ ಬೌಲರ್ಗಳ ಯಶಸ್ವಿ ಬೌಲಿಂಗ್ನಿಂದ ತಮಿಳುನಾಡು ತಂಡ 20 ಓವರ್ಗಳಲ್ಲಿ 90 ರನ್ಗೆ ಆಲೌಟ್ ಆಯಿತು. ಕರ್ನಾಟಕ ಪರ ವಿ.ಕೌಶಿಕ್ 4 ಓವರ್ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರೆ, ಮನೋಜ್ ಭಾಂಡ ಕೂಡ 3 ವಿಕೆಟ್ ಕಬಳಿಸಿದರು.
ಸುಲಭ ಗುರಿ ಬೆನ್ನತ್ತಿದ ಕರ್ನಾಟಕ ತಂಡದ ಆರಂಭಿಕ ಬ್ಯಾಟರ್ಗಳಾದ ಮನೀಶ ಪಾಂಡೆ 42 (29ಎಸೆತ), ಹಾಗೂ ಮಯಾಂಕ್ ಅಗರ್ವಾಲ್ 30 (27 ಎಸೆತ) ರನ್ ಗಳಿಸುವ ಮೂಲಕ ಕೇವಲ 11.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 93 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…