ಕ್ರೀಡೆ

ಕೌಶಿಕ್‌ ದಾಳಿಗೆ ತತ್ತರಿಸಿದ ತಮಿಳುನಾಡು 90 ರನ್‌ಗೆ ಆಲೌಟ್‌

ಇಂದೋರ್:‌ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಟಾಸ್‌ ಗೆದ್ದ ತಮಿಳುನಾಡು ತಂಡ ಬ್ಯಾಟಿಂಗ್‌ ಆಯ್ದುಕೊಂಡಿತ್ತು. ಅದರಂತೆ ಇನ್ನಿಂಗ್ಸ್‌ ಆರಂಭಿಸಿದ ತಮಿಳುನಾಡು ಬ್ಯಾಟರ್‌ಗಳು ಕರ್ನಾಟಕದ ವೇಗಿಗಳ ಮುಂದೆ ಆರಂಭದಲ್ಲೇ ಮುಗ್ಗರಿಸಿದ್ದಾರೆ.

ಜಗದೀಶನ್‌(0) ಖಾತೆ ತೆರೆಯುವ ಮುನ್ನವೇ ವಿ.ಕೌಶಿಕ್‌ ಇವರ ವಿಕೆಟ್‌ ಪಡೆದು ಆರಂಭದ ಯಶಸ್ಸನ್ನು ತಂದು ಕೊಟ್ಟರು. ನಂತರ ಇಂದ್ರಜಿತ್‌ (5) ರನ್‌ ಗಳಿಸಿ ಆಡುವ ವೇಳೆ ವಿದ್ಯಾಧರ್‌ ಪಟೇಲ್‌ ಬೌಲಿಂಗ್‌ನಲ್ಲಿ ಶ್ರೇಯಸ್‌ ಗೋಪಾಲ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು.

ನಂತರ ಬಂದ ಬ್ಯಾಟರ್‌ಗಳು ಆರಂಭಿಕ ಆಟಗಾರರನ್ನೇ ಹಿಂಬಾಲಿಸುತ್ತಾ ಪೆವಿಲಿಯನ್‌ ಹಾದಿ ಹಿಡಿದರು. ಈ ಹಂತದಲ್ಲಿ ನಾಯಕ ಶಾರುಖ್‌ ಖಾನ್‌ 19 ರನ್‌ ಬಾರಿಸಿ ತಂಡಕ್ಕೆ ಆಸರೆಯಾಗುವ ಭರವಸೆ ನೀಡಿದ್ದರು. ಆದರೆ ಮನೋಜ್‌ ಭಾಂಡಗೆ ಎಸೆತ ಗುರುತಿಸುವಲ್ಲಿ ವಿಫಲರಾದ ಶಾರುಖ್‌ ವಿಕೆಟ್‌ ಒಪ್ಪಿಸಿದರು.

ಕರ್ನಾಟಕ ಬೌಲರ್‌ಗಳ ಯಶಸ್ವಿ ಬೌಲಿಂಗ್‌ನಿಂದ ತಮಿಳುನಾಡು ತಂಡ 20 ಓವರ್‌ಗಳಲ್ಲಿ 90 ರನ್‌ಗೆ ಆಲೌಟ್‌ ಆಯಿತು. ಕರ್ನಾಟಕ ಪರ ವಿ.ಕೌಶಿಕ್‌ 4 ಓವರ್‌ಗಳಲ್ಲಿ 10 ರನ್‌ ನೀಡಿ 3 ವಿಕೆಟ್‌ ಪಡೆದರೆ, ಮನೋಜ್‌ ಭಾಂಡ ಕೂಡ 3 ವಿಕೆಟ್‌ ಕಬಳಿಸಿದರು.

ಸುಲಭ ಗುರಿ ಬೆನ್ನತ್ತಿದ ಕರ್ನಾಟಕ ತಂಡದ ಆರಂಭಿಕ ಬ್ಯಾಟರ್‌ಗಳಾದ ಮನೀಶ ಪಾಂಡೆ 42 (29ಎಸೆತ), ಹಾಗೂ ಮಯಾಂಕ್‌ ಅಗರ್‌ವಾಲ್‌ 30 (27 ಎಸೆತ) ರನ್‌ ಗಳಿಸುವ ಮೂಲಕ ಕೇವಲ 11.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 93 ರನ್‌ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

 

ಆಂದೋಲನ ಡೆಸ್ಕ್

Recent Posts

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…

6 mins ago

ಸರ್ಕಾರಕ್ಕೆ ಡೆಡ್‌ಲೈನ್‌ ನೀಡಿ ಮುಷ್ಕರ ವಾಪಾಸ್‌ ಪಡೆದ ಸಾರಿಗೆ ನೌಕರರು

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…

20 mins ago

ಮಾ.23ರಿಂದ ಏ.5 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…

30 mins ago

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

1 hour ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

2 hours ago