ಕ್ರೀಡೆ

ಕೌಶಿಕ್‌ ದಾಳಿಗೆ ತತ್ತರಿಸಿದ ತಮಿಳುನಾಡು 90 ರನ್‌ಗೆ ಆಲೌಟ್‌

ಇಂದೋರ್:‌ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಟಾಸ್‌ ಗೆದ್ದ ತಮಿಳುನಾಡು ತಂಡ ಬ್ಯಾಟಿಂಗ್‌ ಆಯ್ದುಕೊಂಡಿತ್ತು. ಅದರಂತೆ ಇನ್ನಿಂಗ್ಸ್‌ ಆರಂಭಿಸಿದ ತಮಿಳುನಾಡು ಬ್ಯಾಟರ್‌ಗಳು ಕರ್ನಾಟಕದ ವೇಗಿಗಳ ಮುಂದೆ ಆರಂಭದಲ್ಲೇ ಮುಗ್ಗರಿಸಿದ್ದಾರೆ.

ಜಗದೀಶನ್‌(0) ಖಾತೆ ತೆರೆಯುವ ಮುನ್ನವೇ ವಿ.ಕೌಶಿಕ್‌ ಇವರ ವಿಕೆಟ್‌ ಪಡೆದು ಆರಂಭದ ಯಶಸ್ಸನ್ನು ತಂದು ಕೊಟ್ಟರು. ನಂತರ ಇಂದ್ರಜಿತ್‌ (5) ರನ್‌ ಗಳಿಸಿ ಆಡುವ ವೇಳೆ ವಿದ್ಯಾಧರ್‌ ಪಟೇಲ್‌ ಬೌಲಿಂಗ್‌ನಲ್ಲಿ ಶ್ರೇಯಸ್‌ ಗೋಪಾಲ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು.

ನಂತರ ಬಂದ ಬ್ಯಾಟರ್‌ಗಳು ಆರಂಭಿಕ ಆಟಗಾರರನ್ನೇ ಹಿಂಬಾಲಿಸುತ್ತಾ ಪೆವಿಲಿಯನ್‌ ಹಾದಿ ಹಿಡಿದರು. ಈ ಹಂತದಲ್ಲಿ ನಾಯಕ ಶಾರುಖ್‌ ಖಾನ್‌ 19 ರನ್‌ ಬಾರಿಸಿ ತಂಡಕ್ಕೆ ಆಸರೆಯಾಗುವ ಭರವಸೆ ನೀಡಿದ್ದರು. ಆದರೆ ಮನೋಜ್‌ ಭಾಂಡಗೆ ಎಸೆತ ಗುರುತಿಸುವಲ್ಲಿ ವಿಫಲರಾದ ಶಾರುಖ್‌ ವಿಕೆಟ್‌ ಒಪ್ಪಿಸಿದರು.

ಕರ್ನಾಟಕ ಬೌಲರ್‌ಗಳ ಯಶಸ್ವಿ ಬೌಲಿಂಗ್‌ನಿಂದ ತಮಿಳುನಾಡು ತಂಡ 20 ಓವರ್‌ಗಳಲ್ಲಿ 90 ರನ್‌ಗೆ ಆಲೌಟ್‌ ಆಯಿತು. ಕರ್ನಾಟಕ ಪರ ವಿ.ಕೌಶಿಕ್‌ 4 ಓವರ್‌ಗಳಲ್ಲಿ 10 ರನ್‌ ನೀಡಿ 3 ವಿಕೆಟ್‌ ಪಡೆದರೆ, ಮನೋಜ್‌ ಭಾಂಡ ಕೂಡ 3 ವಿಕೆಟ್‌ ಕಬಳಿಸಿದರು.

ಸುಲಭ ಗುರಿ ಬೆನ್ನತ್ತಿದ ಕರ್ನಾಟಕ ತಂಡದ ಆರಂಭಿಕ ಬ್ಯಾಟರ್‌ಗಳಾದ ಮನೀಶ ಪಾಂಡೆ 42 (29ಎಸೆತ), ಹಾಗೂ ಮಯಾಂಕ್‌ ಅಗರ್‌ವಾಲ್‌ 30 (27 ಎಸೆತ) ರನ್‌ ಗಳಿಸುವ ಮೂಲಕ ಕೇವಲ 11.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 93 ರನ್‌ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

 

ಆಂದೋಲನ ಡೆಸ್ಕ್

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

2 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

3 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

3 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

8 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

8 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

9 hours ago