ಕ್ರೀಡೆ

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ರಘುರಾಮ್ ಭಟ್ ಸ್ಪರ್ಧೆ

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಎ. ರಘುರಾಮ್ ಭಟ್ ಅವರು ಸ್ಪರ್ಧಿಸುವ ಮೂಲಕ ನಾಮಪತ್ರವನ್ನು ಸಲ್ಲಿಸಿದ್ದಾರೆ.

ನವೆಂಬರ್ 20ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದವರ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

1980 ರಿಂದ 1993ರವರೆಗೆ ರಘುರಾಮ್ ಭಟ್ ಅವರು ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದಾರೆ. ಭಾರತ ತಂಡವನ್ನು ಎರಡು ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. ಕರ್ನಾಟಕ ತಂಡದಲ್ಲಿ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದ ಅವರು 82 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿ 374 ವಿಕೆಟ್‌ಗಳನ್ನು ಗಳಿಸಿದ್ದಾರೆ. ನಿವೃತ್ತಿಯ ನಂತರ ಅಂಪೈರ್, ಕೋಚ್ ಮತ್ತು ರಾಜ್ಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 64 ವರ್ಷ ರಘುರಾಮ್,  ಉಪಾಧ್ಯಕ್ಷ ಸ್ಥಾನಕ್ಕೂ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಬುಧವಾರ ಕೊನೆಯ ದಿನವಾಗಿದೆ.

andolanait

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

18 mins ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

20 mins ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

22 mins ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

26 mins ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

31 mins ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

36 mins ago