ಕ್ರೀಡೆ

KSCA ಅಧ್ಯಕ್ಷರಾಗಿ ರಘುರಾಮ್ ಭಟ್ ಅವಿರೋಧ ಆಯ್ಕೆ

ಬೆಂಗಳೂರು: ಮಾಜಿ ಎಡಗೈ ಸ್ಪಿನ್ನರ್ ರಘುರಾಮ್ ಭಟ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನವೆಂಬರ್ 20ರಂದು ಚುನಾವಣೆ ನಿಗದಿಯಾಗಿತ್ತು. ಅಭ್ಯರ್ಥಿಗಳಿಗೆ ನಾಮಪತ್ರ ಮರಳಿ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ  ಬಿ.ಎನ್. ಮಧುಕರ್‌, ಸಂಜಯ್ ಪೋಳ್ ಹಾಗೂ ವಿನಯ್ ಮೃತ್ಯುಂಜಯ ಅವರು ತಮ್ಮ ನಾಮಪತ್ರ ಮರಳಿ ಪಡೆದರು. ಭಟ್ ಅವರೊಂದಿಗೆ ಇನ್ನುಳಿದ ಸ್ಥಾನಗಳಿಗೆ ಹಾಗೂ ಆಡಳಿತ ಸಮಿತಿ ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯಲ್ಲಿ ಅಧಿಕಾರದಲ್ಲಿದ್ದವರಲ್ಲಿ ಶಾವೀರ್ ತಾರಾಪುರೆ (ಜಂಟಿ ಕಾರ್ಯದರ್ಶಿ) ಅವರೊಬ್ಬರೇ ಮತ್ತೊಂದು ಅವಧಿಗೆ ಮುಂದುವರಿದಿದ್ದಾರೆ. ಉಳಿದವರೆಲ್ಲರೂ ಕೂಲಿಂಗ್ ಆಫ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಎ. ಶಂಕರ್ ಕಾರ್ಯದರ್ಶಿ ಹಾಗೂ ಬಿ.ಕೆ. ಸಂಪತ್ ಕುಮಾರ್ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ರಘುರಾಮ್ 1980 ರಿಂದ 1993 ರವರೆಗೆ ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದಾರೆ. ಭಾರತ ತಂಡವನ್ನು ಎರಡು ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. 64 ವರ್ಷದ ರಘುರಾಮ್ ಈಗ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಈಚೆಗೆ ಆಯ್ಕೆಯಾಗಿದ್ದರು. ಉಪಾಧ್ಯಕ್ಷರಾಗಿದ್ದ ಜೆ. ಅಭಿರಾಮ್ ಅವರು ನಾಮಪತ್ರ ಸಲ್ಲಿಸಿರಲಿಲ್ಲ. ಸದ್ಯ ಚುನಾಯಿತರಾಗಿರುವ ಪದಾಧಿಕಾರಿಗಳು ಹಾಗೂ ಸಮಿತಿಯು 2025ರವರೆಗೆ ಅಧಿಕಾರದಲ್ಲಿರಲಿದೆ.

ಚುನಾವಣಾಧಿಕಾರಿ ಎಂ.ಆರ್. ಹೆಗಡೆ ಅಂತಿಮಗೊಳಿಸಿರುವ ಪಟ್ಟಿ: ರಘುರಾಮ್ ಭಟ್ (ಅಧ್ಯಕ್ಷ), ಬಿ.ಕೆ. ಸಂಪತ್ ಕುಮಾರ್ (ಉಪಾಧ್ಯಕ್ಷ), ಎ. ಶಂಕರ್ (ಕಾರ್ಯದರ್ಶಿ), ಶಾವೀರ್ ತಾರಾಪುರೆ(ಜಂಟಿ ಕಾರ್ಯದರ್ಶಿ), ಇ.ಎಸ್. ಜಯರಾಮ್ (ಖಜಾಂಚಿ)

ಆಡಳಿತ ಸಮಿತಿ ಸದಸ್ಯರು: ಬೆಂಗಳೂರು ವಲಯ: ಎಂ.ಎಸ್. ಕೇಶವ್ (ಸ್ವಸ್ತಿಕ್ ಯೂನಿಯನ್ ಸಿಸಿ), ಕೆ.ವಿ. ಮಂಜುನಾಥ ರಾಜು (ಹೆಮಂಡ್ಸ್ ಸಿಸಿ), ಎಂ.ಎಸ್. ವಿನಯ್ (ಫ್ರೆಂಡ್ಸ್‌ ಯೂನಿಯನ್ ಸಿಸಿ).

ಮೈಸೂರು ವಲಯ: ಹರಿಕೃಷ್ಣಕುಮಾರ್ ಆರ್.ಕೆ. (ನ್ಯಾಷನಲ್ ಸಿಸಿ, ಮೈಸೂರು)

ಶಿವಮೊಗ್ಗ: ಎಚ್‌.ಎಸ್. ಸದಾನಂದ (ದುರ್ಗಿಗುಡಿ ಕ್ರಿಕೆಟ್‌ ಸಂಸ್ಥೆ)

ತುಮಕೂರು: ಕೆ. ಶಶಿಧರ್ (ವೀನಸ್ ಸಿಸಿ)

ಧಾರವಾಡ: ನಿಖಿಲ್ ಎಂ ಭೂಸದ್ (ಬಿಡಿಕೆ ಕ್ರೀಡಾ ಪ್ರತಿಷ್ಠಾನ. ಹುಬ್ಬಳ್ಳಿ)

ರಾಯಚೂರು: ಸುಜಿತ್ ಬೊಹರಾ (ಸಿಟಿ ಎಲೆವನ್ ಸಿಸಿ)

ಮಂಗಳೂರು: ರತನ್ ಕುಮಾರ್ (ಮಂಗಳೂರು ಸ್ಪೋರ್ಟ್ಸ್ ಕ್ಲಬ್)

ಸಂಜಯ್ ಪೋಳ್ ಹಾಗೂ ಎನ್.ಎನ್. ಯುವರಾಜ್ (ಆಜೀವ ಸದಸ್ಯರ ವಿಭಾಗದಿಂದ ಅವಿರೋಧವಾಗಿ ಆಯ್ಕೆಯಾದವರು)

 

 

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago