ಕ್ರೀಡೆ

KSCA ಅಧ್ಯಕ್ಷರಾಗಿ ರಘುರಾಮ್ ಭಟ್ ಅವಿರೋಧ ಆಯ್ಕೆ

ಬೆಂಗಳೂರು: ಮಾಜಿ ಎಡಗೈ ಸ್ಪಿನ್ನರ್ ರಘುರಾಮ್ ಭಟ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನವೆಂಬರ್ 20ರಂದು ಚುನಾವಣೆ ನಿಗದಿಯಾಗಿತ್ತು. ಅಭ್ಯರ್ಥಿಗಳಿಗೆ ನಾಮಪತ್ರ ಮರಳಿ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ  ಬಿ.ಎನ್. ಮಧುಕರ್‌, ಸಂಜಯ್ ಪೋಳ್ ಹಾಗೂ ವಿನಯ್ ಮೃತ್ಯುಂಜಯ ಅವರು ತಮ್ಮ ನಾಮಪತ್ರ ಮರಳಿ ಪಡೆದರು. ಭಟ್ ಅವರೊಂದಿಗೆ ಇನ್ನುಳಿದ ಸ್ಥಾನಗಳಿಗೆ ಹಾಗೂ ಆಡಳಿತ ಸಮಿತಿ ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯಲ್ಲಿ ಅಧಿಕಾರದಲ್ಲಿದ್ದವರಲ್ಲಿ ಶಾವೀರ್ ತಾರಾಪುರೆ (ಜಂಟಿ ಕಾರ್ಯದರ್ಶಿ) ಅವರೊಬ್ಬರೇ ಮತ್ತೊಂದು ಅವಧಿಗೆ ಮುಂದುವರಿದಿದ್ದಾರೆ. ಉಳಿದವರೆಲ್ಲರೂ ಕೂಲಿಂಗ್ ಆಫ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಎ. ಶಂಕರ್ ಕಾರ್ಯದರ್ಶಿ ಹಾಗೂ ಬಿ.ಕೆ. ಸಂಪತ್ ಕುಮಾರ್ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ರಘುರಾಮ್ 1980 ರಿಂದ 1993 ರವರೆಗೆ ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದಾರೆ. ಭಾರತ ತಂಡವನ್ನು ಎರಡು ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. 64 ವರ್ಷದ ರಘುರಾಮ್ ಈಗ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಈಚೆಗೆ ಆಯ್ಕೆಯಾಗಿದ್ದರು. ಉಪಾಧ್ಯಕ್ಷರಾಗಿದ್ದ ಜೆ. ಅಭಿರಾಮ್ ಅವರು ನಾಮಪತ್ರ ಸಲ್ಲಿಸಿರಲಿಲ್ಲ. ಸದ್ಯ ಚುನಾಯಿತರಾಗಿರುವ ಪದಾಧಿಕಾರಿಗಳು ಹಾಗೂ ಸಮಿತಿಯು 2025ರವರೆಗೆ ಅಧಿಕಾರದಲ್ಲಿರಲಿದೆ.

ಚುನಾವಣಾಧಿಕಾರಿ ಎಂ.ಆರ್. ಹೆಗಡೆ ಅಂತಿಮಗೊಳಿಸಿರುವ ಪಟ್ಟಿ: ರಘುರಾಮ್ ಭಟ್ (ಅಧ್ಯಕ್ಷ), ಬಿ.ಕೆ. ಸಂಪತ್ ಕುಮಾರ್ (ಉಪಾಧ್ಯಕ್ಷ), ಎ. ಶಂಕರ್ (ಕಾರ್ಯದರ್ಶಿ), ಶಾವೀರ್ ತಾರಾಪುರೆ(ಜಂಟಿ ಕಾರ್ಯದರ್ಶಿ), ಇ.ಎಸ್. ಜಯರಾಮ್ (ಖಜಾಂಚಿ)

ಆಡಳಿತ ಸಮಿತಿ ಸದಸ್ಯರು: ಬೆಂಗಳೂರು ವಲಯ: ಎಂ.ಎಸ್. ಕೇಶವ್ (ಸ್ವಸ್ತಿಕ್ ಯೂನಿಯನ್ ಸಿಸಿ), ಕೆ.ವಿ. ಮಂಜುನಾಥ ರಾಜು (ಹೆಮಂಡ್ಸ್ ಸಿಸಿ), ಎಂ.ಎಸ್. ವಿನಯ್ (ಫ್ರೆಂಡ್ಸ್‌ ಯೂನಿಯನ್ ಸಿಸಿ).

ಮೈಸೂರು ವಲಯ: ಹರಿಕೃಷ್ಣಕುಮಾರ್ ಆರ್.ಕೆ. (ನ್ಯಾಷನಲ್ ಸಿಸಿ, ಮೈಸೂರು)

ಶಿವಮೊಗ್ಗ: ಎಚ್‌.ಎಸ್. ಸದಾನಂದ (ದುರ್ಗಿಗುಡಿ ಕ್ರಿಕೆಟ್‌ ಸಂಸ್ಥೆ)

ತುಮಕೂರು: ಕೆ. ಶಶಿಧರ್ (ವೀನಸ್ ಸಿಸಿ)

ಧಾರವಾಡ: ನಿಖಿಲ್ ಎಂ ಭೂಸದ್ (ಬಿಡಿಕೆ ಕ್ರೀಡಾ ಪ್ರತಿಷ್ಠಾನ. ಹುಬ್ಬಳ್ಳಿ)

ರಾಯಚೂರು: ಸುಜಿತ್ ಬೊಹರಾ (ಸಿಟಿ ಎಲೆವನ್ ಸಿಸಿ)

ಮಂಗಳೂರು: ರತನ್ ಕುಮಾರ್ (ಮಂಗಳೂರು ಸ್ಪೋರ್ಟ್ಸ್ ಕ್ಲಬ್)

ಸಂಜಯ್ ಪೋಳ್ ಹಾಗೂ ಎನ್.ಎನ್. ಯುವರಾಜ್ (ಆಜೀವ ಸದಸ್ಯರ ವಿಭಾಗದಿಂದ ಅವಿರೋಧವಾಗಿ ಆಯ್ಕೆಯಾದವರು)

 

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago