ಕ್ರೀಡೆ

ಕೀವಿಸ್‌ ವಿರುದ್ದ ಸೆಮಿಸ್‌ ಪಂದ್ಯಕ್ಕೂ ಮುನ್ನಾ ಆತಂಕ ವ್ಯಕ್ತಪಡಿಸಿದ ಕುಲ್ದೀಪ್‌

ಮುಂಬೈ : ಐಸಿಸಿ ಏಕದಿನ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿರುವ ಭಾರತ ತಂಡ ಸೆಮಿ ಫೈನಲ್‌ ತಲುಪಿದೆ. ಲೀಗ್‌ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಸ್‌ಗೆ ಎಂಟ್ರಿಕೊಟ್ಟಿದೆ.

ಇದರ ಬೆನ್ನಲ್ಲೇ ಎಡಗೈ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಶಾಕಿಂಗ್‌ ಹೇಳಿಕೆ ನೀಡಿದ್ದು, ಭಾರತೀಯ ಬೌಲರ್‌ಗಳು ಸೆಮಿಸ್‌ನಲ್ಲಿ ಎದುರಿಸಬಹುದಾದ ಹಲವು ವಿಶಿಷ್ಠ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಇದೇ ನ.15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಸೆಮಿ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಬ್ಯಾಟಿಂಗ್‌ ಹೆಚ್ಚು ಪ್ರಿಯವಾದ ಈ ಪಿಚ್‌ನಲ್ಲಿ ಬೌಲರ್‌ಗಳು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಡಗೈ ವೇಗಿ ಅಭಿಪ್ರಾಯಪಟ್ಟಿದ್ದಾರೆ.

ವಾಂಖೆಡೆ ಸ್ಟೇಡಿಯಂ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿರುವ ಕುಲ್ದೀಪ್‌, ಇದು ಬೌಲಿಂಗ್‌ ಮಾಡಲು ಕಷ್ಟಕರವಾದ  ಪಿಚ್‌ ಆಗಿದೆ. ಬ್ಯಾಟರ್‌ಗಳು ಇಲ್ಲಿ ಹೆಚ್ಚಾಗಿ ಪ್ರಾಬಲ್ಯ ಸಾಧಿಸಲಿದ್ದಾರೆ. ಓಡಿಐ ಟೂರ್ನಿಯಾಗಿರುವುದರಿಂದ ಲಯಕ್ಕೆ ಮರಳಲು ಸಾಕಷ್ಟು ಸಮಯ ಸಿಗಲಿದೆ. ಆದರೆ ಎದುರಾಳಿ ಮೇಲೆ ಹಿಡಿತ ಸಾಧಿಸಿ ಆಟ ಜಯಿಸಲು ಆರಂಭದಲ್ಲಿ ಒಂದೆರಡು ವಿಕೆಟ್‌ಗಳ ಅವಶ್ಯಕತೆಯಿದೆ ಎಂದು ವಿವರಿಸಿದ್ದಾರೆ.

ಭಾರತ 2019ರ ವಿಶ್ವಕಪ್‌ ಟೂರ್ನಿಯ ಸೆಮಿಸ್‌ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳಲು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಭಾರತದ ವಿರುದ್ಧ 18 ರನ್‌ಗಳ ಜಯ ದಾಖಲಿಸಿತ್ತು. ಮತ್ತು ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಎದುರು ನ್ಯೂಜಿಲ್ಯಾಂಡ್‌ ಸೊಲನುಭವಿಸಿತ್ತು.

ನವೆಂಬರ್‌ 15ರಂದು ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಮೊದಲ ಸೆಮಿ ಫೈನಲ್‌ ಪಂದ್ಯದಲ್ಲಿ ಎದುರಾಗಲಿವೆ. ಈ ಪಂದ್ಯವು ಮುಂಬೈನ ವಾಂಖೆಡೆ ಸಸ್ಟೇಡಿಯಂನಲ್ಲಿ ಮದ್ಯಾಹ್ನ 2 ಗಂಡೆಗೆ ನಡೆಯಲಿದೆ.

andolanait

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

8 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

9 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

10 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

10 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

11 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

11 hours ago