ಮುಂಬೈ : ಐಸಿಸಿ ಏಕದಿನ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿರುವ ಭಾರತ ತಂಡ ಸೆಮಿ ಫೈನಲ್ ತಲುಪಿದೆ. ಲೀಗ್ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಸ್ಗೆ ಎಂಟ್ರಿಕೊಟ್ಟಿದೆ.
ಇದರ ಬೆನ್ನಲ್ಲೇ ಎಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಶಾಕಿಂಗ್ ಹೇಳಿಕೆ ನೀಡಿದ್ದು, ಭಾರತೀಯ ಬೌಲರ್ಗಳು ಸೆಮಿಸ್ನಲ್ಲಿ ಎದುರಿಸಬಹುದಾದ ಹಲವು ವಿಶಿಷ್ಠ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಇದೇ ನ.15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಬ್ಯಾಟಿಂಗ್ ಹೆಚ್ಚು ಪ್ರಿಯವಾದ ಈ ಪಿಚ್ನಲ್ಲಿ ಬೌಲರ್ಗಳು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಡಗೈ ವೇಗಿ ಅಭಿಪ್ರಾಯಪಟ್ಟಿದ್ದಾರೆ.
ವಾಂಖೆಡೆ ಸ್ಟೇಡಿಯಂ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿರುವ ಕುಲ್ದೀಪ್, ಇದು ಬೌಲಿಂಗ್ ಮಾಡಲು ಕಷ್ಟಕರವಾದ ಪಿಚ್ ಆಗಿದೆ. ಬ್ಯಾಟರ್ಗಳು ಇಲ್ಲಿ ಹೆಚ್ಚಾಗಿ ಪ್ರಾಬಲ್ಯ ಸಾಧಿಸಲಿದ್ದಾರೆ. ಓಡಿಐ ಟೂರ್ನಿಯಾಗಿರುವುದರಿಂದ ಲಯಕ್ಕೆ ಮರಳಲು ಸಾಕಷ್ಟು ಸಮಯ ಸಿಗಲಿದೆ. ಆದರೆ ಎದುರಾಳಿ ಮೇಲೆ ಹಿಡಿತ ಸಾಧಿಸಿ ಆಟ ಜಯಿಸಲು ಆರಂಭದಲ್ಲಿ ಒಂದೆರಡು ವಿಕೆಟ್ಗಳ ಅವಶ್ಯಕತೆಯಿದೆ ಎಂದು ವಿವರಿಸಿದ್ದಾರೆ.
ಭಾರತ 2019ರ ವಿಶ್ವಕಪ್ ಟೂರ್ನಿಯ ಸೆಮಿಸ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳಲು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಭಾರತದ ವಿರುದ್ಧ 18 ರನ್ಗಳ ಜಯ ದಾಖಲಿಸಿತ್ತು. ಮತ್ತು ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ನ್ಯೂಜಿಲ್ಯಾಂಡ್ ಸೊಲನುಭವಿಸಿತ್ತು.
ನವೆಂಬರ್ 15ರಂದು ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಎದುರಾಗಲಿವೆ. ಈ ಪಂದ್ಯವು ಮುಂಬೈನ ವಾಂಖೆಡೆ ಸಸ್ಟೇಡಿಯಂನಲ್ಲಿ ಮದ್ಯಾಹ್ನ 2 ಗಂಡೆಗೆ ನಡೆಯಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…