ಕ್ರೀಡೆ

ಕುಲ್‌ದೀಪ್‌ ಯಾದವ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು: ಅನಿಲ್ ಕುಂಬ್ಳೆ!

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ.

ಚೈನಾಮನ್‌ ಖ್ಯಾತಿಯ ಕುಲ್‌ದೀಪ್‌ ಯಾದವ್ ಭಾರತ ತಂಡದ ಪರ 8 ಟೆಸ್ಟ್ ಪಂದ್ಯಗಳಿಂದ 34 ವಿಕೆಟ್ ಪಡೆದಿದ್ದು, ಇದರಲ್ಲಿ ಮೂರು ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ಆದರೆ, ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಆದರೆ, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್ ತಂಡಕ್ಕೆ ಕುಲ್‌ದೀಪ್‌ ಯಾದವ್ ಮಹತ್ವದ ಬಗ್ಗೆ ಕನ್ನಡಿಗ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಜಿಯೋ ಸಿನಿಮಾ ಜೊತೆ ಮಾತನಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕುಲ್‌ದೀಪ್‌ ಯಾದವ್ ಟೆಸ್ಟ್‌ಗೆ ಮರಳುತ್ತಾರೆ: ಕುಂಬ್ಳೆ : “ಕುಲ್‌ದೀಪ್‌ ಯಾದವ್ ವಿಶ್ವ ದರ್ಜೆಯ ಸ್ಪಿನ್ನರ್‌ ಆಗಿದ್ದು, ಟೆಸ್ಟ್ ಕ್ರಿಕೆಟ್‌ಗೆ ಖಂಡಿತಾ ಮರಳಲಿದ್ದಾರೆ. ಲೆಗ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಸಂಘಟಿಸಿ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಲಿದ್ದಾರೆ. ಹಾಗಾಗಿ ತಂಡದಲ್ಲಿ ಲೆಗ್ ಸ್ಪಿನ್ನರ್‌ಗಳನ್ನು ಬೆಳೆಸಬೇಕು, ಅವಕಾಶ ಸಿಕ್ಕಿದಾಗಲೆಲ್ಲ ಅವರನ್ನು ತಂಡದೊಳಗೆ ಕರೆ ತರಬೇಕು,” ಎಂದು ಸ್ಪಿನ್ ದಿಗ್ಗಜ ಹೇಳಿದ್ದಾರೆ.

“ಕುಲ್‌ದೀಪ್ ಯಾದವ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ತುಂಬಾ ಒಳ್ಳೆಯ ಸ್ಪಿನ್ನರ್ ಆಗಿದ್ದಾರೆ. ಅವರಿಗೆ ಅವಕಾಶ ನೀಡಿದಾಗಲೆಲ್ಲ ಉತ್ತಮ ಪ್ರದರ್ಶನ ತೋರಿದ್ದಾರೆ. ವೈಟ್ ಬಾಲ್ ಸ್ವರೂಪದಲ್ಲಿಯೂ ಹಲವರು ಚೈನಾಮನ್‌ ಶೈಲಿಯನ್ನು ಹೊಂದಿದ್ದಾರೆ. ಆದರೆ, ಟೆಸ್ಟ್ ಸ್ವರೂಪದಲ್ಲಿ ಲೆಗ್‌ ಸ್ಪಿನ್ನರ್‌ಗಳ ಕೊರತೆ ಕಾಣಿಸುತ್ತಿದೆ,” ಎಂದು ಭಾರತ ತಂಡದ ಮಾಜಿ ನಾಯಕ ತಿಳಿಸಿದ್ದಾರೆ.

ಕುಲ್‌ದೀಪ್‌ ಯಾದವ್‌ ಅವರನ್ನು 4ನೇ ಸ್ಪಿನ್ನರ್‌ ಆಗಿ ಪರಿಗಣಿಸಬೇಕು: ರವಿಚಂದ್ರನ್ ಅಶ್ವಿನ್ ಅವರು ವೆಸ್ಟ್ ಇಂಡೀಸ್ ವಿರುದ್ಧ ವಿಂಡ್ಸರ್ ಪಾರ್ಕ್‌ನಲ್ಲಿ 12 ವಿಕೆಟ್ ಪಡೆದು ಭಾರತಕ್ಕೆ ಇನಿಂಗ್ಸ್ ಹಾಗೂ 141 ರನ್ ಗೆಲುವು ತಂದುಕೊಟ್ಟಿದ್ದಾರೆ. ಟೀಮ್ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ ಅವರೊಂದಿಗೆ ಕುಲ್‌ದೀಪ್‌ ಯಾದವ್ ಅವರನ್ನು ನಾಲ್ಕನೇ ಸ್ಪಿನ್ನರ್ ಆಗಿ ಟೆಸ್ಟ್ ತಂಡದಲ್ಲಿ ಪರಿಗಣಿಸಬೇಕು ಎಂದು ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ.

“ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರು ಟೀಮ್ ಇಂಡಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇಬ್ಬರೂ ವಿಶ್ವದ ಶ್ರೇಷ್ಠ ಬೌಲರ್‌ಗಳಾಗಿದ್ದು, ಅಕ್ಷರ್ ಪಟೇಲ್ ಮೂರನೇ ಸ್ಪಿನ್ನರ್ ಆಯ್ಕೆಯಾಗಿದ್ದಾರೆ. ಈ ಮೂವರು ಸ್ಪಿನ್ನರ್‌ಗಳೊಂದಿಗೆ ಕುಲ್ದೀಪ್‌ ಯಾದವ್ ಅವರನ್ನು ಅವಕಾಶ ಸಿಕ್ಕಾಗ ತಂಡದಲ್ಲಿ ಸ್ಥಾನ ಕಲ್ಪಿಸಬೇಕು,” ಎಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಹೇಳಿದ್ದಾರೆ.

ಮೊದಲನೇ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಪಡೆದಿದ್ದು, ಜುಲೈ 20 ರಿಂದ ಫೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗುವ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡದ ಸವಾಲನ್ನು ಎದುರಿಸಲಿದೆ.

andolanait

Recent Posts

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

3 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

15 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

21 mins ago

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…

29 mins ago

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…

36 mins ago

ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…

40 mins ago