ಕ್ರೀಡೆ

ಕುಲ್‌ದೀಪ್‌ ಯಾದವ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು: ಅನಿಲ್ ಕುಂಬ್ಳೆ!

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ.

ಚೈನಾಮನ್‌ ಖ್ಯಾತಿಯ ಕುಲ್‌ದೀಪ್‌ ಯಾದವ್ ಭಾರತ ತಂಡದ ಪರ 8 ಟೆಸ್ಟ್ ಪಂದ್ಯಗಳಿಂದ 34 ವಿಕೆಟ್ ಪಡೆದಿದ್ದು, ಇದರಲ್ಲಿ ಮೂರು ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ಆದರೆ, ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಆದರೆ, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್ ತಂಡಕ್ಕೆ ಕುಲ್‌ದೀಪ್‌ ಯಾದವ್ ಮಹತ್ವದ ಬಗ್ಗೆ ಕನ್ನಡಿಗ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಜಿಯೋ ಸಿನಿಮಾ ಜೊತೆ ಮಾತನಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕುಲ್‌ದೀಪ್‌ ಯಾದವ್ ಟೆಸ್ಟ್‌ಗೆ ಮರಳುತ್ತಾರೆ: ಕುಂಬ್ಳೆ : “ಕುಲ್‌ದೀಪ್‌ ಯಾದವ್ ವಿಶ್ವ ದರ್ಜೆಯ ಸ್ಪಿನ್ನರ್‌ ಆಗಿದ್ದು, ಟೆಸ್ಟ್ ಕ್ರಿಕೆಟ್‌ಗೆ ಖಂಡಿತಾ ಮರಳಲಿದ್ದಾರೆ. ಲೆಗ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಸಂಘಟಿಸಿ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಲಿದ್ದಾರೆ. ಹಾಗಾಗಿ ತಂಡದಲ್ಲಿ ಲೆಗ್ ಸ್ಪಿನ್ನರ್‌ಗಳನ್ನು ಬೆಳೆಸಬೇಕು, ಅವಕಾಶ ಸಿಕ್ಕಿದಾಗಲೆಲ್ಲ ಅವರನ್ನು ತಂಡದೊಳಗೆ ಕರೆ ತರಬೇಕು,” ಎಂದು ಸ್ಪಿನ್ ದಿಗ್ಗಜ ಹೇಳಿದ್ದಾರೆ.

“ಕುಲ್‌ದೀಪ್ ಯಾದವ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ತುಂಬಾ ಒಳ್ಳೆಯ ಸ್ಪಿನ್ನರ್ ಆಗಿದ್ದಾರೆ. ಅವರಿಗೆ ಅವಕಾಶ ನೀಡಿದಾಗಲೆಲ್ಲ ಉತ್ತಮ ಪ್ರದರ್ಶನ ತೋರಿದ್ದಾರೆ. ವೈಟ್ ಬಾಲ್ ಸ್ವರೂಪದಲ್ಲಿಯೂ ಹಲವರು ಚೈನಾಮನ್‌ ಶೈಲಿಯನ್ನು ಹೊಂದಿದ್ದಾರೆ. ಆದರೆ, ಟೆಸ್ಟ್ ಸ್ವರೂಪದಲ್ಲಿ ಲೆಗ್‌ ಸ್ಪಿನ್ನರ್‌ಗಳ ಕೊರತೆ ಕಾಣಿಸುತ್ತಿದೆ,” ಎಂದು ಭಾರತ ತಂಡದ ಮಾಜಿ ನಾಯಕ ತಿಳಿಸಿದ್ದಾರೆ.

ಕುಲ್‌ದೀಪ್‌ ಯಾದವ್‌ ಅವರನ್ನು 4ನೇ ಸ್ಪಿನ್ನರ್‌ ಆಗಿ ಪರಿಗಣಿಸಬೇಕು: ರವಿಚಂದ್ರನ್ ಅಶ್ವಿನ್ ಅವರು ವೆಸ್ಟ್ ಇಂಡೀಸ್ ವಿರುದ್ಧ ವಿಂಡ್ಸರ್ ಪಾರ್ಕ್‌ನಲ್ಲಿ 12 ವಿಕೆಟ್ ಪಡೆದು ಭಾರತಕ್ಕೆ ಇನಿಂಗ್ಸ್ ಹಾಗೂ 141 ರನ್ ಗೆಲುವು ತಂದುಕೊಟ್ಟಿದ್ದಾರೆ. ಟೀಮ್ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ ಅವರೊಂದಿಗೆ ಕುಲ್‌ದೀಪ್‌ ಯಾದವ್ ಅವರನ್ನು ನಾಲ್ಕನೇ ಸ್ಪಿನ್ನರ್ ಆಗಿ ಟೆಸ್ಟ್ ತಂಡದಲ್ಲಿ ಪರಿಗಣಿಸಬೇಕು ಎಂದು ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ.

“ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರು ಟೀಮ್ ಇಂಡಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇಬ್ಬರೂ ವಿಶ್ವದ ಶ್ರೇಷ್ಠ ಬೌಲರ್‌ಗಳಾಗಿದ್ದು, ಅಕ್ಷರ್ ಪಟೇಲ್ ಮೂರನೇ ಸ್ಪಿನ್ನರ್ ಆಯ್ಕೆಯಾಗಿದ್ದಾರೆ. ಈ ಮೂವರು ಸ್ಪಿನ್ನರ್‌ಗಳೊಂದಿಗೆ ಕುಲ್ದೀಪ್‌ ಯಾದವ್ ಅವರನ್ನು ಅವಕಾಶ ಸಿಕ್ಕಾಗ ತಂಡದಲ್ಲಿ ಸ್ಥಾನ ಕಲ್ಪಿಸಬೇಕು,” ಎಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಹೇಳಿದ್ದಾರೆ.

ಮೊದಲನೇ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಪಡೆದಿದ್ದು, ಜುಲೈ 20 ರಿಂದ ಫೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗುವ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡದ ಸವಾಲನ್ನು ಎದುರಿಸಲಿದೆ.

andolanait

Recent Posts

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

11 mins ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

31 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

60 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

2 hours ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

2 hours ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago